ಕೊಡಗುಕ್ರೈಂ

ದೇವರಕೊಲ್ಲಿ ಬಳಿ ಕಾರು-ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಗಂಭೀರ

219

ನ್ಯೂಸ್ ನಾಟೌಟ್ : ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕಂಟೈನರ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಕಾರು ಸಂಪಾಜೆ ಮೂಲಕ ಮಡಿಕೇರಿಗೆ ಹೊರಟ್ಟಿತ್ತು ಎಂದು ತಿಳಿದು  ಬಂದಿದೆ. ಗಾಯಾಳುಗಳು ಮೈಸೂರು ಮೂಲದವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

See also  ವರ್ಷದ ಹಿಂದೆಯಷ್ಟೇ ಮದುವೆ ಆಗಿದ್ದ ಅಕ್ಷತಾ RCB ವಿಜಯೋತ್ಸವದಲ್ಲಿ ಸಾವು..! ಗಂಡನ ಎದುರೇ ಜೀವ ಬಿಟ್ಟ ಸಾಫ್ಟ್ ​ವೇರ್ ಇಂಜಿನಿಯರ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget