ರಾಜ್ಯ

ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಗುಣಮಟ್ಟದ ಸೌಲಭ್ಯದೊಂದಿಗೆ ಉಚಿತ ತರಬೇತಿ

ನ್ಯೂಸ್ ನಾಟೌಟ್: ಭವಿಷ್ಯದಲ್ಲಿ ಐಎಎಸ್, ಐಪಿಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅವಕಾಶವನ್ನು ‘ಧೀ ಅಕಾಡೆಮಿ’ ತೆರೆದಿಟ್ಟಿದೆ.

ಬೆಂಗಳೂರಿನ ಚಂದ್ರಾಲೇ ಔಟ್ ನಲ್ಲಿರುವ ಈ ಸಂಸ್ಥೆ ಯುಪಿಎಸ್ ಸಿ ಪರೀಕ್ಷೆ ಬರೆಯುವ ಪ್ರತಿಯೊಬ್ಬ ಅಭ್ಯರ್ಥಿಗೂ ಕಳೆದೆರಡು ವರ್ಷಗಳಿಂದ ಅತ್ಯುತ್ತಮ ತರಬೇತಿ ನೀಡುತ್ತಾ ಬಂದಿದೆ. ಇಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳು ತೇರ್ಗಡೆ ಹೊಂದಿ ಸಂಸ್ಥೆಗೆ ಗೌರವ ತಂದಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿಯೇ ತರಬೇತಿ ನೀಡುವ ‘ಧೀ ಅಕಾಡೆಮಿ’ ಇತರೆ ಎಲ್ಲ ಸ್ಪರ್ಧಾತ್ಮಕ ತರಬೇತಿ ನೀಡುವ ಸಂಸ್ಥೆಗಳಿಗಿಂತ ಭಿನ್ನವಾಗಿ ಕೆಲಸ ನಿರ್ವಹಿಸುತ್ತಿರುವುದು ವಿಶೇಷ.

ದೂರದ ದಿಲ್ಲಿಗೆ ಹೋಗಿ ನಮ್ಮ ಕನ್ನಡಿಗ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಅಂತಹ ಅಭ್ಯರ್ಥಿಗಳು ನಮ್ಮ ಕರ್ನಾಟಕದಲ್ಲೇ ಉತ್ತಮ ಅವಕಾಶವನ್ನು ಪಡೆದುಕೊಳ್ಳಬೇಕು ಅನ್ನುವ ಸದುದ್ದೇಶದಿಂದ ‘ಧೀ ಅಕಾಡೆಮಿ’ಯನ್ನು ಬೆಂಗಳೂರಿನಲ್ಲಿ ತೆರೆಯಲಾಗಿದೆ.

ರಾಜ್ಯದ ಯುಪಿಎಸ್ ಸಿ ಪರೀಕ್ಷಾ ಅಭ್ಯರ್ಥಿಗಳಿಗೆ ದಿಲ್ಲಿಯಿಂದ ನುರಿತ ತಜ್ಞರು ಬಂದು ತರಬೇತಿ ನೀಡುತ್ತಾರೆ. ಜೊತೆಗೆ ಇಲ್ಲಿಯ ಸಂಪನ್ಮೂಲ ವ್ಯಕ್ತಿಗಳು ಕೂಡ ಅಗತ್ಯ ಮಾಹಿತಿ, ಸಲಹೆ -ಸೂಚನೆ ನೀಡುವುದಕ್ಕೆ ಲಭ್ಯವಿದ್ದಾರೆ. ನಿವೃತ್ತ ಐಎಎಸ್ , ಐಪಿಎಸ್ ಅಧಿಕಾರಿಗಳೇ ಉಪನ್ಯಾಸವನ್ನು ಅಭ್ಯರ್ಥಿಗಳಿಗೆ ನೀಡಲಿದ್ದಾರೆ. ‘ಧೀ ಅಕಾಡೆಮಿ’ಗೆ ಈಗಾಗಲೇ ನೋಂದಾವಣೆ ಪ್ರಕ್ರಿಯೆ ಆರಂಭಗೊಂಡಿದೆ.

ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ 9844868662/9844868663 ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೋರಲಾಗಿದೆ. ಈ ಬಗ್ಗೆ ಮಾತನಾಡಿರುವ ಸಂಸ್ಥೆಯ ಕಾವ್ಯಾ ಅನಂತ್, ‘ನಿಮ್ಮ ಕನಸನ್ನು ನನಸಾಗಿಸುವುದಕ್ಕೆ ‘ಧೀ ಅಕಾಡೆಮಿ’ ಅತ್ಯುತ್ತಮ ಆಯ್ಕೆ. ಬಡವರಿಗೆ ಉನ್ನತ ಹುದ್ದೆಗಳ ಕನಸು ಮರೀಚಿಕೆಯಾಗಿಯೇ ಉಳಿದಿದೆ. ಅಂತಹ ಸನ್ನಿವೇಶದಲ್ಲಿ ಅವರಿಗೆ ಉಚಿತ ತರಬೇತಿ ನೀಡುವುದಕ್ಕೆ ನಮಗೆ ಅತ್ಯಂತ ಖುಷಿಯಾಗುತ್ತದೆ. ಎಲ್ಲ ಮೂಲ ಸೌಕರ್ಯವನ್ನು ನಮ್ಮ ಸಂಸ್ಥೆ ಒಳಗೊಂಡಿದೆ. ನಿಮ್ಮ ಎಲ್ಲ ಕನಸುಗಳನ್ನು ನಮ್ಮ ಸಂಸ್ಥೆಯ ವೇದಿಕೆ ಮೂಲಕ ನನಸು ಮಾಡಿಕೊಳ್ಳಬಹುದು’ ಎಂದು ತಿಳಿಸಿದ್ದಾರೆ.

Related posts

ಇಂದು(ಜೂ.3)ದಕ್ಷಿಣ ಕನ್ನಡದ ಪದವೀಧರ, ಶಿಕ್ಷಕರ ಕ್ಷೇತ್ರದ ಮತದಾನ, ಡಿ.ಸಿ ಮುಲ್ಲೈ ಮುಗಿಲನ್ ಮತಚಲಾವಣೆ

ಪಾನಕ ಮಜ್ಜಿಗೆ ಸೇವಿಸಿ ಒಂದೇ ಗ್ರಾಮದ 45 ಮಂದಿ ಅಸ್ವಸ್ಥ, ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದಿದ್ದೇನು..?

ಮನೆ ಮುಂದೆ ಪುನೀತ್ ರಾಜ್ ಕುಮಾರ್ ಗಾಗಿ ದೇವಸ್ಥಾನ ಕಟ್ಟಿಸಿದ ಅಭಿಮಾನಿ..! ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್