ವೈರಲ್ ನ್ಯೂಸ್

60 ಲಕ್ಷ ಮೌಲ್ಯದ ವಜ್ರ ಪತ್ತೆಯಾದದ್ದು ಎಲ್ಲಿ? ಈ ಕುಟುಂಬದ ಆ ಮೂವರಿಗೆ ಅದೃಷ್ಟ ಒಲಿದದ್ದಾದರು ಹೇಗೆ? ಷಣ್ಮುಖ ವಜ್ರದ ರಹಸ್ಯವೇನು ಗೊತ್ತಾ?

177

ನ್ಯೂಸ್ ನಾಟೌಟ್: ಕುಟುಂಬವೊಂದಕ್ಕೆ 60 ಲಕ್ಷ ರೂಪಾಯಿ ಮೌಲ್ಯದ ದೊಡ್ಡ ವಜ್ರದ ಹರಳು ಸಿಕ್ಕಿದೆ ಎಂದು ವರದಿಯಾಗಿದೆ. ಈ ಸುದ್ದಿ ತಿಳಿಯುತ್ತಲೇ ಆಂಧ್ರಪ್ರದೇಶದ ಅನಂತಪುರ, ಎನ್‌ಟಿಆರ್ ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಜನರು ವಜ್ರದ ಹುಡುಕಾಟ ನಡೆಸುತ್ತಿದ್ದಾರೆ. ಇದೀಗ ಎನ್​ಟಿಆರ್​ ಜಿಲ್ಲೆಯ ಗುಡಿಮೆಟ್ಲಾ ಗ್ರಾಮದಲ್ಲೂ ವಜ್ರ ಶೋಧ ಶುರುವಾಗಿದೆ.

ಇದಕ್ಕೂ ಮೊದಲು, ಚಂದರ್ಲಾಪ್ಡು ಮಂಡಲದ ವ್ಯಾಪ್ತಿಯ ಗ್ರಾಮಗಳಿಗೆ ರಾಜ್ಯದ ಇತರ ಭಾಗಗಳಿಂದಲೂ ಪುರುಷರು ಮತ್ತು ಮಹಿಳೆಯರೆನ್ನದೇ ಬಂದು ವಜ್ರಕ್ಕಾಗಿ ಹುಡುಕಾಡಿದ್ದರು. ಇದೀಗ ಗುಡಿಮೆಟ್ಲಾದಲ್ಲಿ ಗುಂಟೂರು ಜಿಲ್ಲೆಯ ಸತ್ತೇನಪಲ್ಲಿ ಗ್ರಾಮದ ಕುಟುಂಬಕ್ಕೆ ಶನಿವಾರ ರಾತ್ರಿ ಆರು ಮುಖದ ವಜ್ರವೊಂದು ಸಿಕ್ಕಿದೆ.

ಕೃಷ್ಣಾ ನದಿಯ ದಡದಲ್ಲಿರುವ ಈ ಗ್ರಾಮದಲ್ಲಿ ವಜ್ರ ಸಿಕ್ಕಿದ್ದು, ಕುಟುಂಬ ಜಾಕ್‌ಪಾಟ್ ಹೊಡೆದಿದೆ ಎಂದು ತಿಳಿದುಬಂದಿದೆ. ವಜ್ರವು 50 ರಿಂದ 60 ಲಕ್ಷ ರೂಪಾಯಿ ಬೆಲೆ ಬಾಳುತ್ತದೆ ಎಂದು ಹೇಳಲಾಗುತ್ತಿದೆ. ಆದರೆ, ವಜ್ರದ ವ್ಯಾಪಾರಿಗಳು ಕುಟುಂಬವನ್ನು ಸಂಪರ್ಕಿಸಿ 40 ಲಕ್ಷ ರೂಪಾಯಿಗೆ ಖರೀದಿಸುವ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಕೃಷ್ಣಾ ನದಿಯ ದಡದ ಗ್ರಾಮಗಳಲ್ಲಿ ವಜ್ರ ಸಿಗುತ್ತಿದೆ ಎಂದು ವದಂತಿ ಹಬ್ಬಿದ ಬಳಿಕ ಈವರೆಗಿನ ಶೋಧದಲ್ಲಿ ಮೂವರು ವ್ಯಕ್ತಿಗಳಿಗೆ ಮೌಲ್ಯಯುತ ಹರಳು ಸಿಕ್ಕಿದೆ ಎಂದು ಸುದ್ದಿಯಾಗಿದೆ. ಅದಾದ ಬಳಿಕವೇ ಜನರು ವಜ್ರದ ಹುಡುಕಾಟ ಆರಂಭಿಸಿದ್ದರು. ಆಂಧ್ರಪ್ರದೇಶ ಇತಿಹಾಸದಲ್ಲಿ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿತ್ತು. ರಾಯಲಸೀಮೆ ಅಮೂಲ್ಯವಾದ ಹರಳುಗಳು ಮತ್ತು ವಜ್ರಗಳ ವ್ಯಾಪಾರಕ್ಕೆ ಹೆಸರುವಾಸಿಯಾಗಿತ್ತು. ಹೀಗಾಗಿ ಈ ಪ್ರದೇಶಗಳಲ್ಲಿ ಭೂಮಿಯಲ್ಲಿ ಹುದುಗಿರುವ ವಜ್ರಗಳು ಮಳೆಗಾಲದ ವೇಳೆ ಗೋಚರಿಸುತ್ತವೆ ಎಂದು ಜನರು ನಂಬಿದ್ದಾರೆ.

ವಜ್ರಗಳು ಸಿಗುವ ಭರವಸೆಯೊಂದಿಗೆ ಜನರು ಜಮೀನಿನಲ್ಲಿ ಅಗೆಯುವುದು, ಕಲ್ಲುಗಳನ್ನು ತೀವ್ರ ನಿಗಾ ವಹಿಸಿ ಶೋಧಿಸುವುದು ಕಂಡುಬಂದಿತ್ತು. ಇನ್ನು ಕೆಲವರು ಜಮೀನುಗಳನ್ನೇ ಭೋಗ್ಯಕ್ಕೂ ಹಾಕಿಕೊಂಡಿದ್ದರು. ಬೆಳಗ್ಗೆಯಿಂದ ರಾತ್ರಿಯವರೆಗೂ ಹುಡುಕಾಟ ನಡೆಸಿದ್ದರು.

See also  ಹಿಂದೂ ಯುವಕನ ಜತೆ ತಿರುಗಾಡುತ್ತಿದ್ದ ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಹೊಡೆದ ಯುವಕರು! ಈ ಜೋಡಿ ಪ್ರೀತಿಸುತ್ತಿದ್ದರೇ..? ಮುಂದೇನಾಯ್ತು? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget