ಚಿಕ್ಕಮಗಳೂರು

‘ಕೊರಗಜ್ಜ’ ಚಿತ್ರದ ಶೂಟಿಂಗ್ ವೇಳೆ ನಟಿ ಶುಭಾ ಪೂಂಜಾ ಜತೆ ಅಸಭ್ಯ ವರ್ತನೆ,ಚಿತ್ರೀಕರಣಕ್ಕೆ ಅಡ್ಡಿಪಡಿಸಿದವರು ಯಾರು?

150

ನ್ಯೂಸ್ ನಾಟೌಟ್ : ಕೊರಗಜ್ಜ ಚಿತ್ರದ ಹಾಡಿನ ಚಿತ್ರೀಕರಣದ ವೇಳೆ ನಟಿ ಶುಭಾ ಪೂಂಜಾ ಅವರೊಂದಿಗೆ ಕಿಡಿಗೇಡಿಗಳ ಗುಂಪೊಂದು ಅಸಭ್ಯ ವರ್ತನೆ ತೋರಿರುವ ಘಟನೆ ವರದಿಯಾಗಿದೆ.ಚಿಕ್ಕಮಗಳೂರಿನ ಕುದುರೆಮುಖದ ಮೈದಾಡಿ ಗುಡ್ಡದಲ್ಲಿ ಶನಿವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕೊರಗಜ್ಜ ಎಂಬ ಚಿತ್ರ ಚಿತ್ರೀಕರಣ ಭರದಿಂದ ನಡೆಯುತ್ತಿದ್ದು,ಇದಕ್ಕಾಗಿ ಹಾಡಿನ ಶೂಟಿಂಗ್ ನಡೆಯುತ್ತಿತ್ತು.ಚಿಕ್ಕಮಗಳೂರಿನ ಮೈದಾಡಿ ಗುಡ್ಡದ ಸುಂದರ ಲೋಕೆಶನ್‌ನಲ್ಲಿ ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಶೂಟಿಂಗ್ ಮಾಡಲಾಗುತ್ತಿತ್ತು.ಈ ವೇಳೆ ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಜೊತೆ ಶುಭಾ ಪೂಂಜಾ ಶೂಟಿಂಗ್‌ನಲ್ಲಿ ತಲ್ಲೀನರಾಗಿದ್ದರು.ಈ ಸಂದರ್ಭ ಯುವಕರ ಗುಂಪೊಂದು ಬಂದು ಶುಭಾ ಪೂಂಜಾ ಅವರ ಕೈ ಹಿಡಿದು ಎಳೆದಾಡಿದ್ದಾರೆ ಎಂದು ತಿಳಿದು ಬಂದಿದೆ.

ಯುವಕರ ಈ ಅಸಭ್ಯ ವರ್ತನೆಯಿಂದ ಇಡೀ ಚಿತ್ರತಂಡ ಬೇಸರ ವ್ಯಕ್ತ ಪಡಿಸಿದ್ದು, ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ಅರ್ಧಕ್ಕೆ ನಿಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಕುರಿತು ಮಾತನಾಡಿರುವ ನಿರ್ದೇಶಕ ಸುಧೀರ್ ಅತ್ತಾವರ “ಮೈದಾಡಿ ಗುಡ್ಡದಲ್ಲಿ ಚಿತ್ರೀಕರಣ ನಡೆಯುವ ವೇಳೆ ಯುವಕರು ನಡೆದ ರೀತಿ ಮನಸ್ಸಿಗೆ ಅತ್ಯಂತ ನೋವು ಉಂಟು ಮಾಡಿದೆ. ಯಾವುದೋ ಉದ್ದೇಶದಿಂದ ಯುವಕರು ಅಸಭ್ಯ ವರ್ತನೆ ಮಾಡಿದ್ದಾರೆ. ಇದರಿಂದ ಚಿತ್ರಿಕರಣವನ್ನೇ ನಿಲ್ಲಿಸಬೇಕಾದಂತ ಪರಿಸ್ಥಿತಿ ನಿರ್ಮಾಣವಾಯಿತು ಎಂದರು.ಹಾಡಿನ ಚಿತ್ರೀಕರಣಕ್ಕಾಗಿ 50 ಜನ ಕಲಾವಿದರು, ಖ್ಯಾತ ಕೊರಿಯೋಗ್ರಾಫರ್ ಗಣೇಶ ಆಚಾರ್ಯ ಕೂಡ ಇದ್ದರು ಎಂದು ಹೇಳಿದ್ರು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದ್ದು, ಸದ್ಯ ಘಟನೆ ಕುರಿತು ಯಾವುದೇ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದ್ದಾರೆ.

See also  ಧಾರಾಕಾರ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರ..! ಹಲವೆಡೆ ಸೇತುವೆ ಮುಳುಗಡೆ, ಕಳಸ-ಉಡುಪಿ ಸಂಪರ್ಕ ಬಂದ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget