ರಾಜಕೀಯ

‘ಏಯ್ ಕುತ್ಕೋಳಯ್ಯ ಯತ್ನಾಳ್‌, ನಾಲಿಗೆ ಮೇಲೆ ಹಿಡಿತವಿರಬೇಕು’ ಏಕವಚನದಲ್ಲಿ ಬಿಜೆಪಿ ಶಾಸಕನಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್ ಆವಾಜ್‌..!

180

ನ್ಯೂಸ್ ನಾಟೌಟ್: ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ನಡುವೆ ಸದನದಲ್ಲಿ ನಡೆದ ಮಾತಿನ ಚಕಮಕಿ ಏಕವಚನಕ್ಕೆ ತಿರುಗಿದ ಘಟನೆ ನಡೆಯಿತು.
ವರ್ಗಾವಣೆ ವ್ಯಾಪಾರವಾಗಿದೆ ಎಂದು ಸದನದಲ್ಲಿ ಬಸನಗೌಡ ಪಾಟೀಲ್‌ ಯತ್ನಾಳ್ ಗಂಭೀರವಾದ ಆರೋಪವನ್ನು ಕೈ ಸರ್ಕಾರದ ವಿರುದ್ಧ ಮಾತನಾಡಿದರು. ಆಗ ಚೇರ್​ನಿಂದ ಎದ್ದ ಡಿ.ಕೆ ಶಿವಕುಮಾರ್​ ಅವರು, ಏ.. ಕೂತ್ಕೋಳಯ್ಯಾ ಅಂತಾ ಏಕವಚನದಲ್ಲೇ ಯತ್ನಾಳ್​ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಹುದ್ದೆ 2,500 ಕೋಟಿ ರೂ. ಮಂತ್ರಿ ಹುದ್ದೆನೂ ಸಾವಿರ ಕೋಟಿ ಎಂದು ಹೇಳುತ್ತಿದ್ದವರು ನೀವು. ಏ.. ಕುತ್ಕೋಳಯ್ಯ ಕಂಡಿದ್ದೀನಿ.

ಏನೇನೂ ಮಾತಾಡಿದ್ದೀರಿ, ಏನೇನು ಕಥೆ ಎನ್ನುವುದು ಹಿಸ್ಟರಿ ನಮ್ಮತ್ರ ಇದೆ. ಅರ್ಥ ಆಯಿತಾ. ಆವಾಗ ನಿಮ್ಮ ಸಿಎಂ ಸುಮ್ಮನಿದ್ದರೆಂದು ನಾವು ಸುಮ್ಮನಿರಕ್ಕೆ ತಯಾರಿಲ್ಲ. ನಿನ್​ ಮಾತ್​ ಮೇಲೆ, ನಾಲಿಗೆ ಮೇಲೆ ಹಿಡಿತವಿರಬೇಕು. ಆವತ್ತು ಅವರು ಸುಮ್ಮನಿದ್ದರು. ನನ್ನಂತವನಾಗಿದ್ದರೇ ಆವತ್ತೇ 24 ಗಂಟೆಯಲ್ಲಿ ಪಾರ್ಟಿಯಿಂದ ಡಿಸ್ಮಿಸ್​ ಮಾಡುತ್ತಿದ್ದೆ. ನಿಮ್ಮಂತರಿಂದಲೇ ಇವತ್ತು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತಿರುವುದು ಎಂದು ಡಿ.ಕೆ. ಶಿವಕುಮಾರ್​ ಗುಡುಗಿದರು.
ಡಿಸಿಎಂಗೆ ಎದುರುತ್ತರ ಕೊಟ್ಟ ಶಾಸಕ ಯತ್ನಾಳ್, ಭ್ರಷ್ಟ ಬಂಡೆ.. ನಾನೇಕೆ ಹೆದರಬೇಕು. ನಿಮ್ಮಂತಹ ಪಕ್ಷಕ್ಕೆ ನಾನು ಏಕೆ ಬರುತ್ತಿದ್ದೆ ಹೇಳಿ. ನನ್ನ ಉಚ್ಛಾಟನೆ ಮಾಡಲು ಇವನ್ಯಾರು, ಹೂ ಇಸ್​ ದಿಸ್ ಎಂದು ಸಿಟ್ಟಿನಿಂದಲೇ ಪ್ರಶ್ನೆ ಮಾಡಿದ್ರು.

See also  ಅವೈಜ್ಞಾನಿಕವಾಗಿ ವಾಹನ ಸವಾರರನ್ನು ತಡೆಯಬೇಡಿ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ ಗೃಹಸಚಿವ..! ಅಧಿಕಾರಿಗಳ ಜೊತೆ ಜಿ ಪರಮೇಶ್ವರ್ ಸಭೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget