ಕ್ರೈಂವೈರಲ್ ನ್ಯೂಸ್

ಬಾಲಕಿಯ ಕೈಬೆರಳಿನ ಬದಲಿಗೆ ನಾಲಿಗೆಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ..! ಈ ಬಗ್ಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಹೇಳಿದ್ದೇನು..? ಏನಿದು ಎಡವಟ್ಟು..?

153

ನ್ಯೂಸ್ ನಾಟೌಟ್: ಆಸ್ಪತ್ರೆಯ ವೈದ್ಯರು ಗುರುವಾರ(16 ಮೇ) ೪ ವರ್ಷದ ಬಾಲಕಿಯ ಕೈಬೆರಳಿನ ಬದಲು ತಪ್ಪಾಗಿ ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಕೋಝಿಕ್ಕೋಡ್ ನ ಸರಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಬಾಲಕಿಯ ಕೈಯಲ್ಲಿ ಆರು ಬೆರಳುಗಳಿದ್ದು, ಆರನೇ ಬೆರಳನ್ನು ತೆಗೆಯಲು ಶಸ್ತ್ರಚಿಕಿತ್ಸೆ ನಿಗದಿಗಾಗಿತ್ತು. ಶಸ್ತ್ರಚಿಕಿತ್ಸೆಯ ಬಳಿಕ ಬಾಯಿಯೊಳಗೆ ಹತ್ತಿಯನ್ನು ತುಂಬಿಕೊಂಡಿದ್ದ ಬಾಲಕಿಯನ್ನು ಹೊರತಂದಾಗ ವೈದ್ಯರ ಎಡವಟ್ಟು ಬೆಳಕಿಗೆ ಬಂದಿದೆ.

ಬಾಲಕಿಯ ಕೈಯಲ್ಲಿ ಆರನೇ ಬೆರಳು ಯಥಾಸ್ಥಿತಿಯಲ್ಲಿದ್ದು ವೈದ್ಯರು ನಾಲಿಗೆಗೆ ಶಸ್ತ್ರಚಿಕಿತ್ಸೆ ನಡೆಸಿದ್ದರು. ಈ ಘಟನೆಯ ಕುರಿತು ತಕ್ಷಣ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇರಳದ ಆರೋಗ್ಯ ಸಚಿವೆ ಮೀನಾ ವೈದ್ಯಕೀಯ ಶಿಕ್ಷಣ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಬಾಲಕಿಯು ಆಸ್ಪತ್ರೆಯಲ್ಲಿ ದಾಖಲಾಗಿದ್ದು,ಘೋರ ವೈದ್ಯಕೀಯ ನಿರ್ಲಕ್ಷಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಕೋರಿ ಪೋಲಿಸ್ ದೂರು ಸಲ್ಲಿಸಲು ಕುಟುಂಬವು ಸಜ್ಜಾಗಿದೆ.

ಒಂದೇ ದಿನ ಇಬ್ಬರು ಮಕ್ಕಳಿಗೆ ಶಸ್ತ್ರಚಿಕಿತ್ಸೆ ನಿಗದಿಯಾಗಿದ್ದು ಈ ತಪ್ಪಿಗೆ ಕಾರಣವಾಗಿತ್ತು ಎಂದು ಆಸ್ಪತ್ರೆಯ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇಂತಹ ಅನುಭವ ಬೇರೆ ಯಾರಿಗೂ ಆಗಬಾರದು. ಬಾಲಕಿಗೆ ನಾಲಿಗೆಯ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದರು.

See also  ಸುಳ್ಯ : ಚಲಿಸುತ್ತಿದ್ದ ಸ್ವಿಫ್ಟ್ ಕಾರು ಪಲ್ಟಿ ಹೊಡೆದದ್ದೇಗೆ? ಪ್ರಯಾಣಿಕರಿಗೇನಾಯ್ತು? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget