ನ್ಯೂಸ್ ನಾಟೌಟ್: ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಕಿಡ್ನಾಪ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದ್ದು ಕಾಂಗ್ರೆಸ್ ಮುಖಂಡರೊಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ.
ಜನವರಿ 25 ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ವಾಕಿಂಗ್ ಮಾಡುವಾಗ ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಿದ್ದರು. ಈ ಅಪಹರಣ ಮಾಡಿರುವ ಹಿಂದೆ ಕಿಂಗ್ ಪಿನ್ ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಎನ್ನುವುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ. ಹೀಗಾಗಿ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ಕೋರ್ಟ್ ಆದೇಶದ ಪ್ರಕಾರ ಜೈಲಿಗಟ್ಟಿದ್ದಾರೆ. ಇನ್ನು ಆರೋಪಿ ಬಳ್ಳಾರಿ ನಗರಸಭೆಯ ಮಾಜಿ ಉಪಾಧ್ಯಕ್ಷರ ಮಗ ಎನ್ನಲಾಗಿದೆ.
ಪಕ್ಷದ ಮುಖಂಡ ಎನ್ನವ ಕಾರಣಕ್ಕೆ ಆರೋಪಿ ರಕ್ಷಣೆಗೆ ಕಾಂಗ್ರೆಸ್ ಪ್ರಭಾವಿಗಳು ಮುಂದಾಗಿದ್ದರು ಎನ್ನಲಾಗಿದೆ. ಹೀಗಾಗಿಯೇ ಪ್ರಭಾವಿಗಳ ಮನೆಯಲ್ಲಿ ಅಡಗಿಕೊಂಡಿದ್ದರಿಂದ ಆರೋಪಿಯಾದ ವಿಜಯ್ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಒಟ್ಟು 7 ಆರೋಪಿಗಳು ಬಂಧನವಾದ ಬಳಿಕ ಎ1 ಆರೋಪಿ ವಿಜಯ್ ನನ್ನು ಅರೆಸ್ಟ್ ಮಾಡಲಾಗಿದೆ. ಕಿಡ್ನಾಪ್ ಮಾಡಿದ 4 ದಿನಗಳ ನಂತರ ಪೊಲೀಸರ ಕೈಗೆ ಸಿಕ್ಕಿದ್ದಾರೆ. ಈ ಕಿಡ್ನಾಪ್ ಗೆ ನಿಖರ ಕಾರಣದ ಬಗ್ಗೆ ಮಾಹಿತಿ ಬಹಿರಂಗವಾಗಿಲ್ಲ.
Click
ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!
ರಾಹುಲ್ ದ್ರಾವಿಡ್ ಕಾರಿಗೆ ಗುದ್ದಿದ ಗೂಡ್ಸ್ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್..!
ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?