ದೇಶ-ವಿದೇಶವೈರಲ್ ನ್ಯೂಸ್

ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ನ್ಯಾಯ ಸಿಗುವವರೆಗೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದ ವೈದ್ಯರು..! ಸುಪ್ರೀಂ ಕೋರ್ಟ್ ನಿರ್ದೇಶನ ಧಿಕ್ಕರಿಸಿ ಪ್ರತಿಭಟನೆ..!

142

ನ್ಯೂಸ್‌ ನಾಟೌಟ್‌: ಮಂಗಳವಾರ ಸಂಜೆ 5 ಗಂಟೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನವನ್ನು ಧಿಕ್ಕರಿಸಿದ ಧರಣಿ ನಿರತ ಕಿರಿಯ ವೈದ್ಯರು, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಮತ್ತು ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿ, ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರತಿಭಟನಾನಿರತ ವೈದ್ಯರ ವಿರುದ್ಧ ಶಿಕ್ಷಾರ್ಹ ವರ್ಗಾವಣೆ ಸೇರಿದಂತೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಭರವಸೆ ನೀಡಿದ ನಂತರ ನ್ಯಾಯಾಲಯವು ಈ ನಿರ್ದೇಶನ ನೀಡಿದೆ.

“ನಮ್ಮ ಬೇಡಿಕೆಗಳನ್ನು ಈಡೇರಿಸದ ಕಾರಣ ನಾವು ಪ್ರತಿಭಟನೆಯನ್ನು ಮುಂದುವರಿಸುತ್ತೇವೆ. ಕೋಲ್ಕತ್ತಾ ಪೊಲೀಸ್ ಆಯುಕ್ತರು, ಆರೋಗ್ಯ ಕಾರ್ಯದರ್ಶಿ, ಆರೋಗ್ಯ ಸೇವೆಗಳ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ನಿರ್ದೇಶಕರನ್ನು ಸಂಜೆ 5 ಗಂಟೆಯೊಳಗೆ ತೆಗೆದುಹಾಕುವಂತೆ ನಾವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇವೆ. ಈ ಸಂಬಂಧ ನಾವು ಚರ್ಚೆಗೆ ಮುಕ್ತರಾಗಿದ್ದೇವೆ” ಎಂದು ಪ್ರತಿಭಟನಾನಿರತ ವೈದ್ಯರು ತಿಳಿಸಿದ್ದಾರೆ.

See also  ಮಂಗಳೂರು: ಬ್ರಿಜೇಶ್ ಚೌಟ ಗೆಲುವಿಗೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತನ ಮೇಲೆ ಹಲ್ಲೆ..! ಕೆಲಸದಿಂದ ವಾಪಸ್ಸಾಗುತ್ತಿದ್ದ ವೇಳೆ ಕಾದು ಕುಳಿತು ಕೃತ್ಯ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget