ಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ರಾತ್ರಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದ ಹೋಟೆಲ್ ಗೆ ನುಗ್ಗಿದ್ದ ನಾಯಿ..! ಓಡಿಸಲು ಹೋದವ 3ನೇ ಮಹಡಿಯಿಂದ ಬಿದ್ದು ಸಾವು..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೋಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಭರದಲ್ಲಿ ಅಚಾನಕ್ಕಾಗಿ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ(ಅ.21) ನಡೆದಿದೆ.

ರಾಮಚಂದ್ರಾಪುರದ ಅಶೋಕನಗರದಲ್ಲಿ ನೆಲೆಸಿರುವ ಉದಯ್ ಕುಮಾರ್ ಎಂಬುವರು ತಮ್ಮ ಸ್ನೇಹಿತರೊಂದಿಗೆ ವಿವಿ ಪ್ರೈಡ್ ಹೋಟೆಲ್ ಗೆ ತೆರಳಿದ್ದರು.. ಗೆಳೆಯನ ಹುಟ್ಟುಹಬ್ಬದ ನಿಮಿತ್ತ ಚಂದಾನಗರದ ವಿವಿ ಪ್ರೈಡ್ ನ ಮೂರನೇ ಮಹಡಿಯ ಕೊಠಡಿಯಲ್ಲಿ ಪಾರ್ಟಿ ಮಾಡಲಾಗಿತ್ತು.

ಪಾರ್ಟಿ ಮಧ್ಯೆ ಹೋಟೆಲ್ ಕೊಠಡಿಯಿಂದ ಹೊರಬಂದ ಉದಯ್ ಕುಮಾರ್ ಅಲ್ಲಿದ್ದ ನಾಯಿಯನ್ನು ನೋಡಿದ್ದು, ಕೂಡಲೇ ಅದನ್ನು ಅಲ್ಲಿಂದ ಓಡಿಸಲು ಮುಂದಾಗಿದ್ದಾರೆ. ಈ ವೇಳೆ ನಾಯಿ ಓಡಿದ್ದು ಅದರ ಹಿಂದೆಯೇ ಉದಯ್ ಕುಮಾರ್ ಕೂಡ ಓಡಿದ್ದಾರೆ. ಈ ವೇಳೆ ಉದಯ್ ಕುಮಾರ್ ಹೊಟೆಲ್ ನ ಗೋಡೆಯ ತೆರೆದ ಕಿಟಕಿಗೆ ಢಿಕ್ಕಿಯಾಗಿ ಆಯ ತಪ್ಪಿ ಕಿಟಕಿ ಒಳಗಿನಿಂದ ಕೆಳಗೆ ಬಿದ್ದಿದ್ದಾರೆ.

ಬಿದ್ದ ರಭಸಕ್ಕೆ ಉದಯ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಆಗಮಿಸಿ ವಿವರ ಸಂಗ್ರಹಿಸಿದ್ದು, ಮೃತರು ಉದಯ್(24) ಪಾಲಿಟೆಕ್ನಿಕ್ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಹೈದರಾಬಾದ್ ನ ಚಂದಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿ ಪ್ರೈಡ್ ಹೋಟೆಲ್ ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಸಂಪೂರ್ಣ ವಿಡಿಯೋ ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

Click

https://newsnotout.com/2024/10/5-year-kannada-news-court-duplicate-court-setup-kannada-news/
https://newsnotout.com/2024/10/isrel-and-hijmu-kannada-news-gold-and-money-found-in-tannel/
https://newsnotout.com/2024/10/cab-driver-kannada-news-viral-news-romance-viral-notice/
https://newsnotout.com/2024/10/kannada-news-actor-darshan-kannada-news-health-issue-highcourt/

Related posts

ಸುಳ್ಯ: ಮಡಪ್ಪಾಡಿಯ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ..! ಇಲ್ಲಿದೆ ಸಂಪೂರ್ಣ ಮಾಹಿತಿ

ನಿರ್ಭಯ ಪ್ರಕರಣ ನೆನಪಿಸಿದ ಬೆಂಗಳೂರಿನ ಘಟನೆ! ಪಾರ್ಕ್‌ನಲ್ಲಿ ಕುಳಿತಿದ್ದ ಮಹಿಳೆಯನ್ನು ಕಾರಿನೊಳಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ!

ಹಜ್ ಯಾತ್ರೆಗೆ ತೆರಳಿದ್ದ ಕರ್ನಾಟಕದ ಮೂವರ ಸಾವು..! ಆ ರಾತ್ರಿ ವಿದೇಶದಲ್ಲಿ ಏನಾಯ್ತು..?