ನ್ಯೂಸ್ ನಾಟೌಟ್: ಉತ್ತರ ಪ್ರದೇಶದ ಜಲಾಲ್ ಪುರದಲ್ಲಿ ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಮಹಿಳೆಯೋರ್ವಳನ್ನು ಬಲವಂತವಾಗಿ ಪತಿ ಮನೆಯಿಂದ ಹೊರಹಾಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಹಿಳೆಯನ್ನು ರಂಜನಾ ಯಾದವ್ ಎಂದು ಗುರುತಿಸಲಾಗಿದೆ. ರಂಜನಾಗೆ ಕಳೆದ ಮಾರ್ಚ್ನಲ್ಲಿ ಅಂಬೇಡ್ಕರ್ ನಗರದ ನಿವಾಸಿ ರಮೇಶ್ ಕುಮಾರ್ ಯಾದವ್ ಜೊತೆ ವಿವಾಹವಾಗಿತ್ತು.
ವರದಿಗಳ ಪ್ರಕಾರ, ವಿವಾಹದ ನಂತರ ಪತಿಯ ಮನೆಗೆ ತೆರಳುವಾಗ ರಂಜನಾ ವರದಕ್ಷಿಣೆಯಾಗಿ ಚಿನ್ನಾಭರಣ, ಫ್ರಿಜ್, ಕೂಲರ್, ಬೆಡ್ ಕೊಂಡೊಯ್ದಿದ್ದರು. ಆದರೆ, ಆಕೆಯ ಪತಿ ಮತ್ತು ಕುಟುಂಬಸ್ಥರು ಹೆಚ್ಚಿನ ವರದಕ್ಷಿಣೆ ತರುವಂತೆ ಪೀಡಿಸಿದ್ದಾರೆ ಎನ್ನಲಾಗಿದೆ. ಆಕೆಯ ಬಳಿಯಿದ್ದ ಚಿನ್ನಾಭರಣವನ್ನು ಕಸಿದುಕೊಂಡಿದ್ದಾರೆ. ಕೊನೆಗೆ 5 ಲಕ್ಷ ರೂ.ತರುವಂತೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
अम्बेडकरनगर: विवाहिता को ससुराल से बाहर निकाला, दहेज की मांग का आरोप
🔸 ससुराल में दहेज न मिलने पर विवाहिता को घर से निकाला
🔸 पीड़िता का आरोप: जेठ और पति ने किया जबरन बाहर निकालने का प्रयास
🔸 वायरल हुआ वीडियो, जिसमें विवाहिता को खींचकर बाहर निकाला जाता है
🔸 2024 में जलालपुर… pic.twitter.com/UfJnVNii3H— भारत समाचार | Bharat Samachar (@bstvlive) March 17, 2025
ವೈರಲ್ ವೀಡಿಯೊದಲ್ಲಿ ಪತಿ ಮನೆಯ ಬಾಗಿಲ ಬಳಿ ನಿಂತುಕೊಂಡಿದ್ದ ರಂಜನಾ ಅವರನ್ನು ಬಲವಂತವಾಗಿ ಹೊರ ಹಾಕುವುದು ಸೆರೆಯಾಗಿದೆ. ಪತಿ ರಮೇಶ್ ಕುಮಾರ್ ಮತ್ತು ಕುಟುಂಬಸ್ಥರಾದ ಶ್ರೀನಾಥ್ ಮತ್ತು ರಕ್ಷಾರಾಮ್ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡಿದರು ಎಂದು ರಂಜನಾ ಆರೋಪಿಸಿದ್ದಾರೆ.
ಈ ಕುರಿತು ಜಲಾಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕೊಡಗಿನಲ್ಲಿ 1,200ಕ್ಕೂ ಹೆಚ್ಚು ಅನಧಿಕೃತ ಹೋಮ್ ಸ್ಟೇಗಳು ಪತ್ತೆ..! ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ..!