ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಡಾ. ಕೆ ಸುಧಾಕರನ್ ಜನವರಿ 31 ರಂದು ಸೇವಾ ನಿವೃತ್ತಿಯಾಗಿದ್ದು, ಅವರನ್ನು ಕಾಲೇಜಿನ ವತಿಯಿಂದ ಗೌರವದಿಂದ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎಂ ವಿದಾಯ ಸಮಾರಂಭ ಉದ್ದೇಶಿಸಿ ಮಾತನಾಡಿ, ಡಾ. ಟಿ. ಸುಧಾಕರನ್ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಡಾ. ಟಿ ಸುಧಾಕರನ್ ಅವರು ಮಾತನಾಡಿ, ಸ್ಥಾಪಕಾಧ್ಯಕ್ಷರನ್ನು ಸ್ಮರಿಸಿ ಕಾಲೇಜಿನ ಆಡಳಿತ ಮಂಡಳಿಗೆ, ಪ್ರಾಂಶುಪಾಲರಿಗೆ, ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದದವರಿಗೆ, ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಗ್ರಂಥಪಾಲಕರಾದ ಉಮೇಶ್, ಕಚೇರಿ ಅಧೀಕ್ಷಕಿ ನಿವೇದಿತಾ ಎಂ, ಕಚೇರಿ ಸಿಬ್ಬಂದಿ ಗಣೇಶ್.ಡಿ ಮತ್ತು ಎಲ್ಲಾ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಡಾ. ಟಿ. ಸುಧಾಕರನ್ ಅವರು 1988ರಲ್ಲಿ ನೆಹರು ಮಮೋರಿಯಲ್ ಕಾಲೇಜಿಗೆ ರಸಾಯನ ಶಾಸ್ತ್ರ ಉಪನ್ಯಾಸಕರಾಗಿ ಸೇವೆಗೆ ಸೇರಿದ್ದರು. 2009ರಲ್ಲಿ ನಿಯೋಜನೆ ಮೇರೆಗೆ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಮತ್ತು 2014ರಿಂದ ಡಾ. ದಯಾನಂದ ಪೈ – ಪಿ ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು. ಪದವಿಪೂರ್ವ ಮತ್ತು ಪದವಿ ಕಾಲೇಜು ಶಿಕ್ಷಣ ಸಂಸ್ಥೆಗಳಲ್ಲಿ ಸುದೀರ್ಘ 37 ವರ್ಷಗಳ ಕಾಲ ಸೇವೆ ಸಲ್ಲಿಸಿ 2025ರ ಜ.31ರಂದು ನೆಹರು ಮೆಮೋರಿಯಲ್ ಕಾಲೇಜಿನಿಂದ ತಮ್ಮ ಕರ್ತವ್ಯಕ್ಕೆ ನಿವೃತ್ತಿ ಪಡೆದುಕೊಂಡಿದ್ದಾರೆ.