ಕರಾವಳಿಸುಳ್ಯ

ಡಾ. ಉಮ್ಮರ್ ಬೀಜದ ಕಟ್ಟೆಯವರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೌರವ, ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರನ್ನು ಅರಸಿಕೊಂಡು ಬಂದ ಸನ್ಮಾನ

156

ನ್ಯೂಸ್ ನಾಟೌಟ್: ಕನ್ನಡದ ಕಟ್ಟಾಳು, ಸಾಹಿತ್ಯ ಪ್ರಿಯ ಡಾ. ಉಮ್ಮರ್ ಬೀಜದ ಕಟ್ಟೆಯವರನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು.

ಮಾನವ ಸಂಪನ್ಮೂಲ ಅಭಿವೃದ್ದಿ ವಿಭಾಗದ ಸಾಧಕರಾಗಿರುವ ಡಾ. ಉಮ್ಮರ್ ಬೀಜದ ಕಟ್ಟೆಯವರನ್ನು ಪ್ರತಿಷ್ಠಿತ ಯೆನಪೋಯ ವಿವಿ ಬೋರ್ಡ್ ಆಫ್ ಸ್ಟಡೀಸ್ ವಿಭಾಗದ ಸದಸ್ಯರಾಗಿ, ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರು ಸುಳ್ಯ ತಾಲೂಕು ೨೬ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆತಿಥ್ಯವಹಿಸಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಯಶಸ್ವಿ ಸಂಘಟಕರಾಗಿ ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರನ್ನು ಅರಸಿಕೊಂಡು ಬಂದಿವೆ.

See also  ಉಪ್ಪಿನಂಗಡಿ: ನಿಯಂತ್ರಣ ಕಳೆದುಕೊಂಡ ಚಾಲಕ..! ಶಾಲಾ ಮಕ್ಕಳಿದ್ದ ಬಸ್ ಪಲ್ಟಿ!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget