ಕರಾವಳಿ

ಮಾಜಿ ಸಿಎಂ ಸದಾನಂದ ಗೌಡ ಭೂಮಿ ಮೇಲಿದ್ದಾರಾ..?

424

ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬಿಜೆಪಿ ಕಾರ್ಯಕರ್ತರ ಬೆವರ ಹನಿಯ ಸಹಾಯದಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡು ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದಲ್ಲಿ ಹಲವಾರು ಖಾತೆಗಳನ್ನು ನಿಭಾಯಿಸಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರ ವಿರುದ್ಧ ಇದೀಗ ಪಕ್ಷದ ಕಾರ್ಯಕರ್ತರ ಆಕ್ರೋಶ ತಿರುಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೆಲವು ಕಾರ್ಯಕರ್ತರು ಡಿವಿ ಸದಾನಂದ ಗೌಡರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ. ಟೀಕೆಗಳ ಸುರಿಮಳೆ ಬಳಿಕ ನಿಧಾನವಾಗಿ ಬಿಜೆಪಿಯ ನಾಯಕರು ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಆದರೆ ಸುಳ್ಯದವರೇ ಆದ ಮಾಜಿ ಮುಖ್ಯಮಂತ್ರಿ, ಡಿ.ವಿ ಸದಾನಂದ ಗೌಡರು ಇದುವರೆಗೂ ಸುಳಿದಿಲ್ಲ. ಇದರಿಂದ ಮತ ನೀಡಿ ಗೆಲ್ಲಿಸಿದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಹತ್ಯೆಗೀಡಾದ ಪ್ರವೀಣ್‌ ಅವರ ಪಕ್ಕದ ಊರಿನವರಾದ ಡಿವಿ ಸದಾನಂದ ಗೌಡರಿಗೆ ಕನಿಷ್ಟ ಮಾನವೀಯತೆಯೂ ಇಲ್ಲ ಅನ್ನುವ ನೋವು ಕಾರ್ಯಕರ್ತರಿಂದ ವ್ಯಕ್ತವಾಗಿದೆ.

ಇದೀಗ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ ಆಗಿದ್ದು `ನಮ್ಮೂರಿನಲ್ಲಿ @ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು. ಈಗ ಅವರು ಭೂಮಿ ಮೇಲೆ ಇದ್ದಾರಾ ಯಾರಿಗಾದ್ರು ಗೊತ್ತಾ? ಯಾಕಂದ್ರೆ ಅವರ ಊರಿನಲ್ಲೇ ಒಂದು ಕೊಲೆಯಾಗಿದೆ ತಿಳಿಸಬೇಕಿತ್ತು. ಅವರ ಫೋನ್ ನಂಬರ್ ಯಾರಲ್ಲಾದರೂ ಇದ್ರೆ ಕೊಡಿ ನಾನಾದರು ಫೋನ್ ಮಾಡಿ ಹೇಳ್ತೇನೆ’ ಎನ್ನುವ ಬರವಣಿಗೆಯಲ್ಲಿ ಇದೀಗ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

See also  ಇನ್ಮುಂದೆ ಸ್ವಸಹಾಯ ಸಂಘಗಳಿಗೆ ಪೆಟ್ರೋಲ್ ಬಂಕ್ ನಿರ್ವಹಣೆ ಹೊಣೆ..! ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget