ರಾಜಕೀಯವೈರಲ್ ನ್ಯೂಸ್

ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ, ಡಿ.ವಿ ಸದಾನಂದ ಗೌಡ ಹೀಗೆ ಹೇಳಿದ್ಯಾಕೆ..?

158

ನ್ಯೂಸ್ ನಾಟೌಟ್: ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಕುಶಾಲನಗರದ ಗೌಡ ಸಮಾಜದ ಆವರಣದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ‌ದ ಗ್ಯಾರಂಟಿ ಯೋಜನೆ ಸರಕಾರದ ಖಜಾನೆ ಖಾಲಿಯಾದ ಅನಂತರ ಬಂದ್‌ ಆಗಲಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರದ್ದು ಶಾಶ್ವತ ಯೋಜನೆ ಎಂದರು. ಕಾಂಗ್ರೆಸ್‌ ಅಪಪ್ರಚಾರದ ಆಧಾರದಲ್ಲಿ ಗೆಲುವಿಗೆ ಶತ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಬಂದಿರುವುದು ಜನರ ದುರ್ದೈವ. ಈ ಬಾರಿಯ ಚುನಾವಣೆ ವಿಭಿನ್ನವಾಗಿದ್ದು, ಜಾತಿ ಲೆಕ್ಕಾಚಾರ ನಡೆಯದು. ಮೋದಿ ಅವರ ಕಾರ್ಯವೈಖರಿ ಜನಪರವಾಗಿದ್ದು, 3ನೇ ಅವಧಿಗೆ ಕೇಂದ್ರದಲ್ಲಿ ಮುಂದುವರೆಸಲು ಅಗತ್ಯ ಬೆಂಬಲ ನೀಡಬೇಕಿದೆ ಎಂದರು.ಈ ಚುನಾವಣೆಯಲ್ಲಿ ದೇಶದ ಬಹಳಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್‌ನವರು ತಾವೇ ದೇಶದ ಆಳ್ವಿಕೆ ಮಾಡುತ್ತೇವೆ ಎಂದು ಹೇಳಿಕೊಳ್ಳುತ್ತಿರುವುದು ತಮಾಷೆಯ ಸಂಗತಿ ಎಂದು ಲೇವಡಿ ಮಾಡಿದರು.

See also  ದರ್ಶನ್ ​ಗೆ ಅಭಿಮಾನಿಗಳಿಂದ ಸಮಸ್ಯೆ, ನಟನ ಮನೆ ಮುಂದೆ ಹೈಡ್ರಾಮ..! ವಿಡಿಯೋ ವೈರಲ್
  Ad Widget   Ad Widget   Ad Widget   Ad Widget   Ad Widget   Ad Widget   Ad Widget