ಕರಾವಳಿಕೊಡಗುಕ್ರೈಂವೈರಲ್ ನ್ಯೂಸ್

DYSP cyber case: ಡಿವೈಎಸ್‌ಪಿ ಖಾತೆಯಿಂದಲೇ 15 ಲಕ್ಷ ರೂ. ದೋಚಿದ ಸೈಬರ್ ಕಳ್ಳರು..! ಮಡಿಕೇರಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದ ಮುರಳೀಧರ್ ವಂಚನೆಗೆ ಒಳಗಾಗಿದ್ದೇಗೆ..?

193

ನ್ಯೂಸ್ ನಾಟೌಟ್: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ದೋಚಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ (Hassan) ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ದೂರು ದಾಖಲಿಸಿದ್ದಾರೆ. ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ಪಿ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.

ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25 ವರ್ಗಾವಣೆಗಳ ಮೂಲಕ ಒಟ್ಟು 12,12,711 ರೂ. ವರ್ಗಾವಣೆ ಮಾಡಿದ್ದಾರೆ. ಕೆನರಾಬ್ಯಾಂಕ್ ಭಾಗಮಂಡಲ ಶಾಖೆ ಖಾತೆಯಿಂದ ಬೆಳಿಗ್ಗೆ 10.28 ಗಂಟೆಯಿಂದ ಮಧ್ಯಾಹ್ನ 12.56 ಗಂಟೆವರೆಗೆ ಒಟ್ಟು 10 ವರ್ಗಾವಣೆ ಮೂಲಕ 3,88,050 ರೂ. ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಎರಡು ಕೆನರಾ ಬ್ಯಾಂಕ್ ಖಾತೆಗಳಿಂದ ಒಟ್ಟು 15,98,761 ರೂ. ಹಣವನ್ನು ಸೈಬರ್ ಕಳ್ಳರು ಬೇರೆ ಖಾತೆಗೆ ವರ್ಗಾಯಿಸಿದ್ದಾರೆ ಎನ್ನಲಾಗಿದೆ.

See also  ವರ್ಷದ ಹಿಂದೆಯಷ್ಟೇ ಮದುವೆ ಆಗಿದ್ದ ಅಕ್ಷತಾ RCB ವಿಜಯೋತ್ಸವದಲ್ಲಿ ಸಾವು..! ಗಂಡನ ಎದುರೇ ಜೀವ ಬಿಟ್ಟ ಸಾಫ್ಟ್ ​ವೇರ್ ಇಂಜಿನಿಯರ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget