ಕರಾವಳಿಕ್ರೈಂವೈರಲ್ ನ್ಯೂಸ್

ಮಂಗಳೂರು: ಈದ್ ಮಿಲಾದ್ ನಂದು ಹಿಂದೂ ಮೀನು ವ್ಯಾಪಾರಿಗಳು ಮಾರಾಟ ಮಾಡಬಾರದೇ? ಕಡ್ಡಾಯ ರಜೆ ತೆಗೆದುಕೊಳ್ಳುವಂತೆ ಮೀನು ವ್ಯಾಪಾರಸ್ಥ ಸಂಘ ಹೇಳಿದ್ದೇಕೆ? ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಹೇಳಿದ್ದೇನು?

183

ನ್ಯೂಸ್ ನಾಟೌಟ್: ಮಂಗಳೂರು ಮೀನುಗಾರಿಕಾ ಬಂದರು ಧಕ್ಕೆಯಲ್ಲಿ ಹಿಂದೂ ಮೀನು ವ್ಯಾಪಾರಸ್ಥರ ಮೇಲೆ ನಡೆಯುವ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ, ವಿಶ್ವ ಹಿಂದೂ ಪರಿಷದ್ ಇದನ್ನು ಖಂಡಿಸಿದೆ.

ಮುಂದೆ ಬರಲಿರುವ ಮುಸ್ಲಿಮರ ಹಬ್ಬ ಈದ್ ಮಿಲಾದ್ ನ ವೇಳೆ ಹಿಂದೂ ಮೀನು ವ್ಯಾಪಾರಸ್ಥರು ಮೀನುಗಾರಿಕಾ ಬಂದರಿನಲ್ಲಿ ವ್ಯಾಪಾರ ನಡೆಸಿದರೆ ಅವರ ಮೇಲೆ ಒಂದು ತಿಂಗಳ ಕಾಲ ವ್ಯಾಪಾರ ನಿರ್ಬಂಧ ಹಾಗೆ ದಂಡ ವಿಧಿಸುವಂತಹ ಬ್ಯಾನರ್ ನ್ನು ಧಕ್ಕೆಯ ಹಸಿ ಮೀನು ವ್ಯಾಪಾರಸ್ಥರು ಹಾಕಿದ್ದು ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.

ಪ್ರಜಾಪ್ರಭುತ್ವ ದೇಶದಲ್ಲಿ ಇದು ಸಂವಿಂಧಾನ ವಿರೋಧಿಯಾಗಿದೆ. ಹಿಂದೂ ಮೀನು ವ್ಯಾಪಾರಸ್ಥರ ಮೇಲೆ ನಡೆಯುವ ಈ ದೌರ್ಜನ್ಯಕ್ಕೆ ವಿಶ್ವ ಹಿಂದೂ ಪರಿಷದ್ ಖಂಡನೆ ಮಾಡುತ್ತದೆ.

ಅಲ್ಲದೆ ಜಿಲ್ಲಾಡಳಿತ ತಕ್ಷಣ ಹಸಿ ಮೀನು ವ್ಯಾಪಾರಸ್ಥ ಸಂಘದ ಅಧ್ಯಕ್ಷರ ಮೇಲೆ ಹಾಗು ಈ ಬ್ಯಾನರ್ ಅಳವಡಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದ್ದಾರೆ ಎಂದು ವರದಿ ತಿಳಿಸಿದೆ.

See also  ಚಿಕ್ಕಮಗಳೂರಿನಲ್ಲಿ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ,ಐಡಿ ಮತ್ತು ಸಮವಸ್ತ್ರ ಕಡ್ಡಾಯಗೊಳಿಸಿದ ಆಡಳಿತ ಮಂಡಳಿ
  Ad Widget   Ad Widget   Ad Widget   Ad Widget   Ad Widget   Ad Widget   Ad Widget