ಕ್ರೈಂಬೆಂಗಳೂರುರಾಜಕೀಯ

ಚುನಾವಣಾ ರ್‍ಯಾಲಿ ವೇಳೆ ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ, ಬಿಜೆಪಿ ಕಾರ್ಯಕರ್ತನ ದುರ್ಮರಣ..!

161

ನ್ಯೂಸ್ ನಾಟೌಟ್: ಚುನಾವಣಾ ರ್‍ಯಾಲಿ ವೇಳೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸೋಮವಾರ(ಎ.8) ನಡೆದಿದೆ.

ಕೆ.ಆರ್ ಪುರಂನ (KR Puram) ಗಣೇಶ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಸ್ಕೂಟರ್​ ಸವಾರ ಪ್ರಕಾಶ್ (35) ಸಾವನ್ನಪ್ಪಿದ್ದಾನೆ. ಸಿಬ್ಬಂದಿ ನಿಂತಿದ್ದ ಕಾರಿನ ಡೋರ್ ಒಪನ್ ಮಾಡಿದ್ದು, ಹಿಂಬದಿಯಿಂದ ಬಂದ ಪ್ರಕಾಶ್​ಗೆ ಡೋರ್​ಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಈ ವೇಳೆ ಬಸ್​ ಅವರ ಮೇಲೆ ಹರಿದಿದ್ದು, ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರಕಾಶ್​ ಸಾವನ್ನಪ್ಪಿದ್ದಾರೆ. ಕೆಆರ್​ ಪುರಂ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮವಾರ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ‌ ಶೋಭಾಕರಂದ್ಲಾಜೆ ಕೆ.ಆರ್ ಪುರಂ ಭಾಗದಲ್ಲಿ ಪ್ರಚಾರ ಮಾಡುತ್ತಿದ್ದರು. ಅವರ ಕಾರನ್ನ ರಸ್ತೆ ಬದಿ ಪಾರ್ಕ್ ಮಾಡಲಾಗಿತ್ತು.

ಈ ವೇಳೆ ಕಾರಿನ ಚಾಲಕ ಡೋರ್ ತೆಗೆದಿದ್ದು, ಹಿಂದೆಯಿಂದ ಬಂದ ಪ್ರಕಾಶ್​ಗೆ ಬಡಿದು ರಸ್ತೆಯ ಮೇಲೆ ಬಿದ್ದಿದ್ದಾರೆ. ಇದೇ ವೇಳೆ ಅಲ್ಲಿಗೆ ಖಾಸಗಿ ಬಸ್ ಅವರ ಮೇಲೆ ಹರಿದಿದೆ. ಈ ಬಗ್ಗೆ ಶೋಭಾ ಕರಂದ್ಲಾಜೆ, “ಇದೊಂದು ಅನಿರೀಕ್ಷಿತ ಘಟನೆ, ನಾವೆಲ್ಲರೂ ಮುಂದೆ ಹೋಗಿದ್ದೆವು, ಕಾರು ರಸ್ತೆ ಬದಿಯಲ್ಲಿ ನಿಂತಿತ್ತು. ನಮ್ಮ ಕಾರ್ಯಕರ್ತ ಪ್ರಕಾಶ್ ಅವರು ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಅವರ ಮೇಲೆ ಬಸ್​ ಹರಿದಿದ್ದು, ಗಾಯಗೊಂಡಿದ್ದರು. ಆದರೆ ಅವರಿಗೆ ಯಾವ ರೀತಿ ಗಾಯವಾಗಿದೆ ಎಂಬುದು ಶವ ಪರೀಕ್ಷೆಯಿಂದ ತಿಳಿದುಬರಲಿದೆ. ನಾವು ಅವರ ಕುಟುಂಬಕ್ಕೆ ಪರಿಹಾರ ಮತ್ತು ರಕ್ಷಣೆಯನ್ನು ಕೊಡುತ್ತೇವೆ” ಎಂದು ಹೇಳಿದ್ದಾರೆ.

Follow us for more updates:

FB PAGE : https://www.facebook.com/NewsNotOut2023

Insta : https://www.instagram.com/newsnotout/

Tweet : https://twitter.com/News_Not_Out

YouTube : https://www.youtube.com/@newsnotout8209

Koo app: https://www.kooapp.com/profile/NewsNotOut

Website : https://newsnotout.com/

See also  ಗ್ಯಾರಂಟಿಗಳಿಗೆ ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಮುಂದಾದ ಸರ್ಕಾರ..? ನಕಲಿ ಬಿಪಿಎಲ್ ಕಾರ್ಡ್‌ಗಳ ಪತ್ತೆಗೆ ಹೊಸ ಕ್ರಮ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget