ಕೊಡಗು

ದಂಪತಿ, ಮೂವರು ಮಕ್ಕಳಿದ್ದ ಕಾರನ್ನು ಮಗುಚಿ ಹಾಕಲು ಯತ್ನಿಸಿದ ಕಾಡಾನೆ.. ಕುಶಾಲನಗರ-ಮಡಿಕೇರಿ ಹೆದ್ದಾರಿಯಲ್ಲೇ ಘಟನೆ..!

ಮಡಿಕೇರಿ: ಕುಶಾಲನಗರದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿರುವ ಘಟನೆ ಆನೆಕಾಡು ಎಂಬಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮೂವರು ಮಕ್ಕಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಪ್ರವಾಸಿತಾಣ ನಿಸರ್ಗಧಾಮ ವೀಕ್ಷಣೆಗೆ ಕುಶಾಲನಗರಕ್ಕೆ ತೆರಳಿದ್ದ ಕುಟುಂಬ ಮಡಿಕೇರಿ ಕಡೆಗೆ ಪ್ರಯಾಣ ಬೆಳೆಸಿತ್ತು. ರಾತ್ರಿ ಸುಮಾರು 8 ಗಂಟೆ ಹೊತ್ತಿನಲ್ಲಿ ಕಾಡಾನೆ ದಿಢೀರ್ ಆಗಿ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಕಾರನ್ನು ನಿಧಾನವಾಗಿ ಚಲಾಯಿಸಲಾಯಿತ್ತಾದರೂ ಕಾಡಾನೆ ಸಮೀಪಕ್ಕೆ ಬಂದಾಗಿತ್ತು. ಮಡದಿ, ಮಕ್ಕಳು ಆತಂಕದಿಂದ ಜೋರಾಗಿ ಕಿರುಚಿಕೊಳ್ಳಲು ಆರಂಭಿಸಿದರು. ದೂರದಲ್ಲಿ ಬೈಕ್ ನಲ್ಲಿ ಬರುತ್ತಿದ್ದವರು ವೇಗವಾಗಿ ಬರುವಂತೆ ಸನ್ನೆ ಮಾಡಿದ್ದಾರೆ. ಅಷ್ಟೊತ್ತಿಗಾಗಲೇ ಕಾಡಾನೆ ತನ್ನ ದಂತದಿಂದ ಕಾರನ್ನು ಮಗುಚಲು ಯತ್ನಿಸಿದೆ. ಆದರೆ ಸುತ್ತಮುತ್ತಲಿದ್ದವರು ಆನೆಯ ಗಮನವನ್ನು ಬೇರೆಡೆಗೆ ಸೆಳೆದುದರಿಂದ ಇಡೀ ಕುಟುಂಬ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ.

Related posts

ಮಡಿಕೇರಿ:ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ..!ಚಾಲಕನಿಗೇನಾಯ್ತು?

ಮಡಿಕೇರಿ:ನೀವೆಲ್ಲಾದರೂ 5 ಕೆಜಿ ತೂಕದ ಗಜ ನಿಂಬೆ ಹಣ್ಣು ಕಂಡಿದ್ದೀರಾ..!ಇಷ್ಟೊಂದು ಗಾತ್ರದ ನಿಂಬೆ ಹಣ್ಣು ಸಿಕ್ಕಿದ್ಯಾರಿಗೆ?ಎಲ್ಲಿ ಸಿಕ್ಕಿತು?ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ ನೋಡಿ..

ಮಡಿಕೇರಿ: ಕರಿಕೆ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ಮಲೆಯಾಳ ಶಾಲೆಗೆ ಸೇರುವ ಅನಿವಾರ್ಯತೆ..!