ಕ್ರೈಂವೈರಲ್ ನ್ಯೂಸ್

ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು..! ಕಂದಕಕ್ಕೆ ಉರುಳಿ ಬಿದ್ದ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್ ನಾಟೌಟ್ : ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ.

ಆಹಾರ ಅರಿಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದೆ. ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿರಬಹುದು ಎನ್ನಲಾಗುತ್ತಿದ್ದು, ವಿದ್ಯುತ್ ಆಘಾತಕ್ಕೊಳಗಾದ ಆನೆ ಕಂದಕಕ್ಕೆ ಉರುಳಿ ಬಿದ್ದಿದೆ. ಆದರೆ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವೇ ಇರಲಿಲ್ಲ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾನವ ಕಾಡಾನೆಗಳ ಸಂಘರ್ಷ ತೀವ್ರಗೊಂಡಿದೆ. ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ, ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವು ಕಾಣುತ್ತಿವೆ.
ಜಮೀನಿನ ಕೆಲಸಕ್ಕೆ ತೆರಳಿದ ಶಿವಬಸಪ್ಪ ಆನೆಯ ದಾರುಣ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ.

Related posts

‘ಸಿದ್ದರಾಮಯ್ಯರನ್ನು ಮುಗಿಸಲು ಡಿಕೆ ಶಿವಕುಮಾರ್‌ ಪ್ಲಾನ್‌..! ನಂಗೆ ಎಲ್ಲಾ ಗೊತ್ತಿದೆ’ ಎಂದ ಯತ್ನಾಳ್‌

ಸಿನಿಮೀಯ ರೀತಿಯಲ್ಲಿ ಮನೆಗೆ ನುಗ್ಗಿದ ಕೀಚಕರು! ಪೋಷಕರಿಗೆ ಥಳಿಸಿ ಬಾಲಕಿ ಮೇಲೆ ಅತ್ಯಾಚಾರ..! ಏನಿದು ಪ್ರತೀಕಾರದ ಸ್ಟೋರಿ?

2700ಕ್ಕೂ ಹೆಚ್ಚು ನಕಲಿ ಪ್ರಮಾಣಪತ್ರ ನೀಡಿದ್ದ ಎಂಬಿಎ ಪದವೀಧರರು! ಒರ್ವನನ್ನು ಹಿಡಿಯಲು ಹೋದ ಪೊಲೀಸರಿಗೆ ಸಿಕ್ಕಿದ್ದು ನಾಲ್ಕು ದಂಧೆಕೋರರು!