ಕ್ರೈಂವೈರಲ್ ನ್ಯೂಸ್

ಮತ್ತೆ ಫೀಲ್ಡ್ ಗೆ ಇಳಿತಿದ್ದಾರೆ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾನಾಯಕ್..? ಗುಂಡಿನ ದಾಳಿ ಪ್ರಕರಣ ತನಿಖೆಗೆ ಬುಲಾವ್ ಸಾಧ್ಯತೆ, ದುಷ್ಕರ್ಮಿಗಳ ಎದೆಯಲ್ಲೀಗ ಢವ..ಢವ..!

159

ನ್ಯೂಸ್ ನಾಟೌಟ್: ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಲಕ್ಷ್ಮಿ ಗೌತಮ್ ಮತ್ತು ಎನ್​ಕೌಂಟರ್​ ಸ್ಪೆಷಲಿಸ್ಟ್ ದಯಾ ನಾಯಕ್ (Encounter Dayanayak) ಸೇರಿದಂತೆ ಮುಂಬೈ ಪೊಲೀಸ್ ಅಧಿಕಾರಿಗಳ ತಂಡವು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ಅವರ ಮನೆಯ ಹೊರಗೆ ಕಾಣಿಸಿಕೊಂಡಿದೆ ಭಾನುವಾರ ಮುಂಜಾನೆ, ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದರು. ಈ ಪ್ರಕರಣದ ವಿಚಾರಣೆ ಹೊಣೆ ಇದೀಗ ದಯಾ ನಾಯಕ್ ವಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೊಲೀಸರು ಅವರ ನಿವಾಸದ ಸುತ್ತಲೂ ಭದ್ರತೆ ಹೆಚ್ಚಿಸಿದ್ದಾರೆ. ಈ ವೇಳೆ ದಯಾನಾಯಕ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ನಟ ವಾಸಿಸುವ ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್ಮೆಂಟ್​ ಹೊರಗೆ ಬೆಳಿಗ್ಗೆ 5 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಕನಿಷ್ಠ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯ ನಂತರ ಪೊಲೀಸರು ತಿಳಿಸಿದ್ದಾರೆ. ಘಟನೆಯ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಲ್ಮಾನ್ ಖಾನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಸುದ್ದಿ ಸಂಸ್ಥೆ ಎಎನ್ಐ ಬಿಡುಗಡೆ ಮಾಡಿದ ವೀಡಿಯೊದಲ್ಲಿ, ಜಂಟಿ ಪೊಲೀಸ್ ಆಯುಕ್ತ (ಅಪರಾಧ ವಿಭಾಗ) ಲಕ್ಷ್ಮಿ ಗೌತಮ್ ಮತ್ತು ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರು ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಸಲ್ಮಾನ್ ಮನೆಯ ಹೊರಗಡೆ ಕಾಣಿಸಿಕೊಂಡರು.

ಖಾನ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳು ಅವರ ಮನೆಯ ಬಳಿ ಸ್ಥಾಪಿಸಲಾದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಸಂಗ್ರಹಿಸುತ್ತಿರುವುದು ಕಂಡುಬಂದಿದೆ. ಆರೋಪಿಗಳನ್ನು ಬಂಧಿಸಲು 15 ತಂಡಗಳನ್ನು ರಚಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ, ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ತಮ್ಮ ಮನೆಯಲ್ಲಿದ್ದರು.

See also  14 ಕಾರುಗಳ ಮೇಲೆ ಆಸಿಡ್ ಸುರಿದ ಈತನ ಕತೆಯೇ ರೋಚಕ! ಅಪಾರ್ಟ್‌ಮೆಂಟ್ ನಿವಾಸಿಗಳಲ್ಲಿ ಆತಂಕ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget