ಕ್ರೈಂವೈರಲ್ ನ್ಯೂಸ್

ಜಾರಿ ನಿರ್ದೇಶನಾಲಯ ಅಧಿಕಾರಿಗಳೇ ಲಂಚಕ್ಕೆ ಬೇಡಿಕೆ ಇಟ್ಟರಾ..? ರೆಡ್‌ಹ್ಯಾಂಡಾಗಿ ಅರೆಸ್ಟ್‌ ಆದ ಇಡಿ ಅಧಿಕಾರಿಗಳ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಹೇಳಿದ್ದೇನು?

174

ನ್ಯೂಸ್ ನಾಟೌಟ್ : ಲಂಚ ಕೇಳಿದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.

ಚಿಟ್ ಫಂಡ್ ವಿಚಾರದಲ್ಲಿ ಪ್ರಕರಣ ದಾಖಲಿಸುವುದನ್ನು ತಡೆಯಲು ಇಬ್ಬರು ಅಧಿಕಾರಿಗಳು 17 ಲಕ್ಷ ರೂ. ಲಂಚ ಕೇಳಿದ್ದ ಆರೋಪ ದಾಖಲಾಗಿದೆ ಎಂದು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ.

ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಹೇಳಿಕೆಯ ಪ್ರಕಾರ, ಇಬ್ಬರು ಇಡಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಯನ್ನು ನೇವಲ್ ಕಿಶೋರ್ ಮೀನಾ, ಸಹವರ್ತಿಯನ್ನು ಬಾಬುಲಾಲ್ ಮೀನಾ ಎಂದು ಗುರುತಿಸಲಾಗಿದೆ. ಎಸಿಬಿ ತಂಡವು (ACB Team) ರಾಜಸ್ಥಾನದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಅಧಿಕಾರಿಯನ್ನ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

See also  ಪುಟ್ಟ ಮಗುವನ್ನು ಕೆರೆಗೆ ಎಸೆದದ್ದೇಕೆ ತಂದೆ..! ತಾಯಿ ಇಲ್ಲದ ಮಕ್ಕಳಿಗೆ ಇದೆಂಥಾ ಶಿಕ್ಷೆ? ಪೊಲೀಸರು ಈ ಬಗ್ಗೆ ಹೇಳಿದ್ದೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget