Latestಕ್ರೈಂಚಿಕ್ಕಮಗಳೂರುರಾಜ್ಯ

ಅತ್ತೆ, ಮಗಳು, ನಾದಿನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ..! ಸೆಲ್ಫಿ ವಿಡಿಯೋ ಮಾಡಿ ಆರೋಪಿಯೂ ಆತ್ಮಹತ್ಯೆ..!

632

ನ್ಯೂಸ್‌ ನಾಟೌಟ್: ವ್ಯಕ್ತಿಯೊಬ್ಬ ತಮ್ಮ ಕುಟುಂಬದ ನಾಲ್ವರ ಮೇಲೆ ಗುಂಡು ಹಾರಿಸಿ ಹತ್ಯೆಗೈದು, ಬಳಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರು ತಾಲೂಕಿನ ಖಾಂಡ್ಯ ಹೋಬಳಿ ಮಾಗಲು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಅತ್ತೆ ಜ್ಯೋತಿ(50), ಮಗಳು ಮೌಲ್ಯ(6) ಮತ್ತು ನಾದಿನಿ ಸಿಂಧು(24)ಯ ಮೇಲೆ ರತ್ನಾಕರ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ಘಟನೆಯಲ್ಲಿ ನಾದಿನಿಯ ಗಂಡನ ಕಾಲಿಗೆ ಗುಂಡು ತಗಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹತ್ಯೆ ಬಳಿಕ ರತ್ನಾಕರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿದ್ದಾನೆ.

ಹತ್ಯೆಗೂ ಮುನ್ನ ರತ್ನಾಕರ ಸೆಲ್ಫಿ ವಿಡಿಯೋ ಮಾಡಿದ್ದು, ‘ಕುಟುಂಬದವರು ನನಗೆ ಮೋಸ ಮಾಡಿದ್ದಾರೆ. ಎರಡು ವರ್ಷದಿಂದ ಪತ್ನಿ ನನ್ನನ್ನು ಬಿಟ್ಟು ಹೋಗಿದ್ದಾಳೆ’ ಎಂದು ಹೇಳಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿನಾಳೆ(ಎ.2) ಮತ್ತೆ ನಟ ದರ್ಶನ್ ಪ್ರಕರಣದ ವಿಚಾರಣೆ..! ಜಾಮೀನು ರದ್ದು ಕೋರಿ ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ವಕೀಲರು..!

See also  ವರನ ಕತ್ತಲ್ಲಿದ್ದ ನೋಟಿನ ಮಾಲೆಯಿಂದ ನೋಟು ಎಗರಿಸಿದ ಕಳ್ಳ..! ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ಮದುಮಗ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget