ಕ್ರೈಂವೈರಲ್ ನ್ಯೂಸ್

ತಾಳಿ ಕಟ್ಟುವಾಗ ಈತನನ್ನು ಬೇಡ ಎಂದದ್ದೇಕೆ ವಧು..? ಕುಟುಂಬಸ್ಥರ ನಡುವೆ ವಾಗ್ವಾದ..! ಮುಂದೇನಾಯ್ತು..?

176

ನ್ಯೂಸ್ ನಾಟೌಟ್ : ಮಂಟಪದಲ್ಲಿಯೇ ಮದುವೆಗಳು ಮುರಿದುಬಿದ್ದ ಪ್ರಸಂಗಗಳನ್ನು ಹಲವು ಕಡೆ ನೋಡಿರುತ್ತೇವೆ ಮತ್ತು ಹಳೆ ಸಿನಿಮಾಗಳಲ್ಲೂ ಇಂತಹ ದೃಶ್ಯ ಕಂಡಿರುತ್ತೇವೆ. ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಅಂಥದ್ದೇ ವಿಚಿತ್ರ ಘಟನೆಯೊಂದು ನಡೆದಿದೆ.

ತಾಳಿ ಕಟ್ಟವ ವೇಳೆಗೆ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ (Marriage Cancel) ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ . ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (Hosadurga Taluku) ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ(ಡಿ.೭) ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ ಎಂದು ವರದಿ ತಿಳಿಸಿದೆ.

ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಪ್ರಯೋಜನವಾಗದ ಹಿನ್ನೆಲೆ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ನಾನಾ ಬಗೆಯಲ್ಲಿ ಮಾತನಾಡುತ್ತಾ ಹಿಂದಿರುಗಿದ್ದಾರೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ತಾಕ್ಕತ್ತಿದ್ರೆ ಹಿಡೀರಿ, ಟಿಪ್ಪುವಿಗೆ ಮೋದಿ ಕೈಮುಗಿವ ಫೇಕ್ ವಿಡಿಯೋ ಹಾಕಿದ ವ್ಯಕ್ತಿಯಿಂದ ಆವಾಜ್..! ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಸೃಷ್ಟಿಸಿದ ಈತ ಯಾರು..?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget