Latestಕ್ರೈಂವೈರಲ್ ನ್ಯೂಸ್ಸಿನಿಮಾ

ಮಾಜಿ ಬಿಗ್ ​ಬಾಸ್ ಸ್ಪರ್ಧಿ ಲಾಯರ್ ಜಗದೀಶ್ ಜೈಲಿನಿಂದ ಬಿಡುಗಡೆ..! 93 ದಿನಗಳ ಬಳಿಕ ಜಾಮೀನು..!

772

ನ್ಯೂಸ್ ನಾಟೌಟ್: ಮಾಜಿ ಬಿಗ್ ​ಬಾಸ್ ಸ್ಪರ್ಧಿ, ವಕೀಲ ಜಗದೀಶ್ ಬರೋಬ್ಬರಿ 93 ದಿನಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ತಮ್ಮ ಬಂಧನಕ್ಕೆ ಸರ್ಕಾರ ಹಾಗೂ ಪೊಲೀಸ್ ವ್ಯವಸ್ಥೆಯನ್ನು ನೇರ ಹೊಣೆ ಎಂದಿದ್ದಾರೆ.

ಜಗದೀಶ್, ಜನವರಿ 24ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಬಂಧನವಾದ ದಿನ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದರು. ಇದೀಗ 93 ದಿನಗಳ ಬಳಿಕ ಜೈಲಿಂದ ಹೊರಬಂದಿದ್ದಾರೆ.

ಫೇಸ್ ​ಬುಕ್ ​​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಜಗದೀಶ್, ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಧೀರ ಹೋರಾಟ ನಡೆಸುತ್ತಿರುವ ಹೋರಾಟಗಾರ ನಾನು, PSI ಹಗರಣವನ್ನು ಬಯಲು ಮಾಡಿದ್ದು , ADGP ಅಮೃತಪಾಲ್ ಅವರನ್ನು ಜೈಲಿಗೆ ಕಳಿಸಿದ್ದು ನಮ್ಮ ಟೀಂ, ದೊಡ್ಡ ರಾಜಕಾರಣಿಗಳ ಸೆಕ್ಸ್ ಸ್ಕ್ಯಾಂಡಲ್ ಅನ್ನು  ಬಹಿರಂಗಪಡಿಸಿದ್ದು , ರವಿ ಚೆನ್ನಣ್ಣನವರ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದ್ದು , ಟ್ರಾಫಿಕ್ ಟೋವಿಂಗ್ ಸಿಸ್ಟಂ ಅನ್ನು ನಿಲ್ಲಿಸಿದ್ದು , ಕೊಡಿಗೇಹಳ್ಳಿ ಸುತ್ತಮುತ್ತ ಡ್ರಗ್ಸ್ ವಿರುದ್ಧ ಹೋರಾಟ ನಡೆಸಿದ್ದು, ಇವೆಲ್ಲವೂ ನನ್ನ ಹೋರಾಟದ ಭಾಗ’ ಎಂದು ಜಗದೀಶ್ ಹೇಳಿದ್ದಾರೆ.

‘ಈ ಧೈರ್ಯದ ಹೋರಾಟವನ್ನು ಸಹಿಸದ ಭ್ರಷ್ಟ ರಾಜಕೀಯ ಮತ್ತು ಪೊಲೀಸ್ ವ್ಯವಸ್ಥೆ, ನನ್ನ ಮತ್ತು ನನ್ನ ಮಗನ ವಿರುದ್ಧ ಸಂಚು ರೂಪಿಸಿ, 25/01/2025 ರಂದು ಸ್ಥಳಿಯ ಪುಂಡರಿಂದ ನನಗೆ ಮಾರಣಾಂತಿಕ ಹಲ್ಲೆ ನಡೆಸಿ, ಅಕ್ರಮವಾಗಿ ಜೈಲಿಗೆ ಕಳುಹಿಸಲಾಗಿತ್ತು. ಇವತ್ತಿಗೆ 93 ದಿನಗಳ ನಂತರ ನನಗೆ ನ್ಯಾಯ ಸಿಕ್ಕಿದೆ. ಜಾಮೀನು ಲಭಿಸಿದೆ. ನ್ಯಾಯಕ್ಕಾಗಿ ನನ್ನ ಹೋರಾಟ ಇನ್ನೂ ಜೀವಂತವಿದೆ, ನಾನು ಶರಣಾಗುವುದಿಲ್ಲ’ ಎಂದಿದ್ದಾರೆ.

ಜಗದೀಶ್ ನಿವಾಸವಿರುವ ಕೊಡಿಗೇಹಳ್ಳಿಯಲ್ಲಿ ಅಣ್ಣಮ್ಮ ದೇವಿ ಉತ್ಸವದ ವಿಚಾರವಾಗಿ ಲಾಯರ್‌ ಜಗದೀಶ್ ಹಾಗೂ ಸ್ಥಳೀಯರ ನಡುವೆ ದೊಡ್ಡ ಗಲಾಟೆ ನಡೆದಿತ್ತು. ಈ ವೇಳೆ ಕಾನೂನು ಬಾಹಿರವಾಗಿ ಬಂದೂಕು ಬಳಕೆ ಮಾಡಿದ ಆರೋಪದ ಮೇಲೆ ಜಗದೀಶ್‌ ಹಾಗೂ ಅವರ ಗನ್ ​ಮ್ಯಾನ್ ಅನ್ನು ಪೊಲೀಸರು ಬಂಧಿಸಿದ್ದರು.

ಮೇ 4ರಂದು NEET ಪರೀಕ್ಷೆ, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಮತ್ತು ಯಾವುದೇ ಲೋಹದ ಉಪಕರಣಗಳನ್ನು ಧರಿಸುವಂತಿಲ್ಲ..!

ಬಾಂಗ್ಲಾ ಅಕ್ರಮ ವಲಸಿಗರ ವಿರುದ್ಧ ಬೃಹತ್‌ ಬುಲ್ಡೋಜರ್ ಕಾರ್ಯಾಚರಣೆ..! 74 ಬುಲ್ಡೋಜರ್, 200 ಟ್ರಕ್, 1800 ಕಾರ್ಮಿಕರು, 3000 ಪೊಲೀಸರು..!

See also  ಏ.1ರಿಂದ ಕರ್ನಾಟಕದಲ್ಲಿ ಟೋಲ್‌ ದರ ಶೇ.5ರಷ್ಟು ಏರಿಕೆ..! ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ದರ ಪರಿಷ್ಕರಣೆ..!
  Ad Widget   Ad Widget   Ad Widget   Ad Widget