ಬೆಂಗಳೂರು

‘MP ಸುಮಲತಾ ಅಂಬರೀಶ್,ಅಭಿಷೇಕ್ ಅಂಬರೀಶ್ ಗೊತ್ತಾ’ ಎಂದು ಪೊಲೀಸರಿಗೆ ಅವಾಜ್ ಹಾಕಿದ ಅವಿವಾ ಅಭಿಷೇಕ್ ಸಹೋದರ..!,ಕುಡಿದ ಮತ್ತಿನಲ್ಲಿ ಆಡಂ ಬಿದ್ದಪ್ಪ ನಡುರಸ್ತೆಯಲ್ಲೇ ರಂಪಾಟ..!ಏನಿದು ಘಟನೆ?

154

ನ್ಯೂಸ್ ನಾಟೌಟ್ : ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ್ಪರ ಪುತ್ರ ಆಡಂ ಬಿದ್ದಪ್ಪ (Adam Bidapa) ಕುಡಿದ ಮತ್ತಿನಲ್ಲಿ ವೇಗವಾಗಿ ಕಾರು ಚಲಾಯಿಸಿ ಗಲಾಟೆ ಮಾಡಿರುವ ಘಟನೆ ವರದಿಯಾಗಿದೆ. ಹಾರ್ನ್ ಮಾಡಿದ ವ್ಯಕ್ತಿಯ ಮೇಲೆಯೇ ಗಲಾಟೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ (Yelahanka) ನಡೆದಿದೆ.

ಈ ವೇಳೆ ಸ್ಥಳಕ್ಕೆ ಬಂದ ಯಲಹಂಕ ಸಂಚಾರಿ ಪೊಲೀಸರು (Police) ಇದನ್ನು ಪ್ರಶ್ನಿಸಿದ್ದಾರೆ. ರಾಹುಲ್ ಎನ್ನುವವರು ದಾರಿ ಬಿಡುವಂತೆ ಕಾರ್ ಹಾರ್ನ್‌ ಮಾಡಿದ್ರು.ಇದಕ್ಕೆ ರಂಪಾಟ ಮಾಡಿದ್ದ ಆಡಂ ಬಿದ್ದಪ್ಪ ಪೊಲೀಸರಿಗೆ ಅವಾಜ್ ಹಾಕಿದ್ದಾನೆ.ಈ ವೇಳೆ ಅವರ ಜತೆಗೂ ಆಡಂ ವಾಗ್ವಾದ ಮಾಡಿದ್ದಾನೆ. ಬಳಿಕ ಅವಿವಾ ಬಿದ್ದಪ್ಪಗೆ ಕರೆ ಮಾಡಿ ಪೊಲೀಸರೊಂದಿಗೆ ಮಾತಾಡುವಂತೆ ಹೇಳಿದ್ದಾನೆ. ಈ ವೇಳೆ ಪೊಲೀಸರು ನೀನು ಯಾರಿಗಾದರೂ ಕರೆ ಮಾಡು ಎಂದು ಹೇಳಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ಈ ವೇಳೆ ನಾನು ಯಾರು ಗೊತ್ತಾ, ನನಗೆ ಫವರ್‌ಫುಲ್ ವ್ಯಕ್ತಿಗಳು ಗೊತ್ತು,ನನ್ನ ವಿಷಯಕ್ಕೆ ಬಂದ್ರೆ ನಿಂಗೆ ಏನಾಗುತ್ತೆ ಗೊತ್ತಾ? ಅಭಿಷೇಕ್ ಅಂಬರೀಶ್ ಪತ್ನಿ ಅವೀವಾ ಬಿದ್ದಪ್ಪ,ಎಂಪಿ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಗೊತ್ತಾ ಎಂದು ಅವಾಜ್ ಕೂಡ ಹಾಕಿದ್ದಾನೆ ಎನ್ನಲಾಗಿದೆ.

https://newsnotout.com/2023/10/karnataka-districts-huge-bengal-monitor-lizard-sighting-in-kodagu/

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮೀ ಪ್ರಸಾದ್, ಆಡಂ ಕುಡಿದ ಮತ್ತಿನಲ್ಲಿ ಪೊಲೀಸರು ಹಾಗೂ ವ್ಯಕ್ತಿಯೊಬ್ಬರ ಜೊತೆ ಗಲಾಟೆ ಮಾಡಿದ್ದಾನೆ. ನಾನು ಪ್ರಭಾವಿ ಆಗಿದ್ದೇನೆ ನನ್ನನ್ನೇ ಪ್ರಶ್ನೆ ಮಾಡುತ್ತೀರಾ ಎಂದು ಬೆದರಿಕೆ ಹಾಕಿದ್ದಾನೆ. ಯಲಹಂಕ ಸಂಚಾರಿ ಪೊಲೀಸರು ಆತನ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಮೆಡಿಕಲ್ ಟೆಸ್ಟ್ ಮಾಡಿಸಿ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಈ ವಿಚಾರವಾಗಿ ರಾಹುಲ್ ಎಂಬವರು ದೂರು ನೀಡಿದ್ದಾರೆ ಎಂದು ತಿಳಿಸಿದ್ದಾರೆ.ಈ ಸಂಬಂಧ ಕಾರು ಚಾಲಕ ರಾಹುಲ್, ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

https://www.youtube.com/watch?v=mtKTEHG9O4I
See also  'ಮುಸ್ಲಿಂ ಹುಡುಗಿಯರನ್ನು ಲವ್ ಮಾಡಿ ಮತಾಂತರ ಮಾಡಬೇಕಾಗುತ್ತೆ, ಹಿಂದೂ ಯುವಕರಿಗೂ ಗಂಡಸ್ತನವಿದೆ' ಆರೂಢ ಭಾರತೀ ಸ್ವಾಮೀಜಿ ಪ್ರಚೋಧನಕಾರಿ ಭಾಷಣ
  Ad Widget   Ad Widget   Ad Widget   Ad Widget   Ad Widget   Ad Widget   Ad Widget