ಕರಾವಳಿ

ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆಗೆ ಶರಣು,ಉಜಿರೆಯಲ್ಲೊಂದು ಹೃದಯವಿದ್ರಾವಕ ಘಟನೆ

154

ನ್ಯೂಸ್ ನಾಟೌಟ್‌: ಮಗ ಆತ್ಮಹತ್ಯೆ ಮಾಡಿಕೊಂಡು 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಿಂದ ವರದಿಯಾಗಿದೆ. ಯೊಗೀಶ್ ಪೂಜಾರಿ (41) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಯೋಗಿಶ್ ಪೂಜಾರಿ ಮತ್ತು ರೇಷ್ಮಾ ದಂಪತಿ ಮಗ ಯಕ್ಷಿತ್ (14) ಜ.4 ರಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.ಇದೀಗ ಮಗ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿಯೇ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತಕಾರಿ ಸಂಗತಿಯಾಗಿದೆ.ಮಗನ ಉತ್ತರ ಕ್ರಿಯೆ ಜ.14 ಭಾನುವಾರ ನಡೆದಿತ್ತು.ಬಾಲಕ 8ನೇ ತರಗತಿಯಲ್ಲಿ ಓದುತ್ತಿದ್ದ.ಮನೆಯಲ್ಲಿ ತಮ್ಮನೆದುರಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ.ಆತ್ಮಹತ್ಯೆ ಗೆ ತಮ್ಮನ ಜೊತೆ ನಡೆದ ಗಲಾಟೆಯೇ ಕಾರಣ ಎನ್ನಲಾಗಿತ್ತು.ಆರು ವರ್ಷದ ತಮ್ಮ ಜೊತೆ ಈ ಹಿಂದೆ ಕೂಡ ಗಲಾಟೆ ನಡೆದಿತ್ತು.ಈ ಗಲಾಟೆಯಲ್ಲಿ ತಮ್ಮ ಯಕ್ಷಿತ್ ಹೊಟ್ಟೆ ಮೇಲೆ ಕಚ್ಚಿ ಗಾಯ ಮಾಡಿದ್ದನೆಂದು ತಿಳಿದು ಬಂದಿದೆ.

ಈ ವಿಚಾರದಲ್ಲಿ ನೊಂದು ತಮ್ಮನ ಎದುರಲ್ಲೇ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ.ಈತ ಉಜಿರೆ ಖಾಸಗಿ ಶಾಲೆಯಲ್ಲಿ 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಮನೆಯ ರೂಂ ನಲ್ಲಿ ತಾಯಿಯ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.ತಂದೆ -ತಾಯಿ ಕೆಲಸಕ್ಕೆ ಹೋದ ಬಳಿಕ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ.ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.

See also  ಉಚಿತ ವಿದ್ಯುತ್ ಬೆನ್ನಲ್ಲೇ ಶಾಕ್‌, ಇನ್ಮುಂದೆ ಹಗಲಿಗೊಂದು ದರ- ರಾತ್ರಿಗೊಂದು ದರ, ಸರ್ಕಾರ ಹೇಳಿದ್ದೇನು?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget