ಕರಾವಳಿ

ಕೊಣಾಜೆ: ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ, ಓರ್ವನ ಬಂಧನ

998

ಕೊಣಾಜೆ: ಮಧ್ಯಾಹ್ನ ಕಾಲೇಜು ಮುಗಿಸಿ ಮನೆ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಆರೋಪಿ. ಕಾಲೇಜಿನಿಂದ ಮನೆಯ ಕಡೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಯಾಕೂಬ್ ಕಿರುಕುಳ ನೀಡಿರುವುದಾಗಿ ದೂರಲಾಗಿದ್ದು, ಗ್ರಾಮಸ್ಥರು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ರಾಸಲೀಲೆ ಅಪಪ್ರಚಾರ ವಿರುದ್ಧ ಮಹಾಲಿಂಗೇಶ್ವರನ ಮೊರೆ ಹೋದ ಮಠಂದೂರು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget