ಬೆಂಗಳೂರು

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ;ನಾಲ್ಕನೇ ಮಹಡಿಯಲ್ಲಿದ್ದ ಪಬ್‌ವೊಂದರಲ್ಲಿ ಸಿಲಿಂಡರ್‌ ಸ್ಪೋಟ,ಪ್ರಾಣ ಉಳಿಸಿಕೊಳ್ಳಲು ಜಿಗಿದ ವ್ಯಕ್ತಿ!ವಿಡಿಯೋ ವೀಕ್ಷಿಸಿ..

160

ನ್ಯೂಸ್ ನಾಟೌಟ್ : ರಾಜಧಾನಿ ಬೆಂಗಳೂರಿನಲ್ಲಿ ಬಾರಿ ದೊಡ್ಡ ಅಗ್ನಿ ದುರಂತ ಸಂಭವಿಸಿದೆ. ಸಿಲಿಂಡರ್ ಸ್ಪೋಟದಿಂದಾಗಿ ಈ ಅವಘಡ ಸಂಭವಿಸಿದ್ದು ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.

ಬೆಂಗಳೂರಿನ ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್‌ ವೊಂದರಲ್ಲಿ ಸಿಲಿಂಡರ್‌ ಸ್ಟೋಟದ ಪರಿಣಾಮ ಈ ಅನಾಹುತವಾಗಿದೆ. ಕೋರಮಂಗಲದ ಮಡ್‌ ಪೈಪ್ ಹುಕ್ಕಾ ಪಬ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿ ಧಗಧಗನೇ ಬೆಂಕಿ ಹತ್ತಿ ಉರಿಯಲಾರಂಭಿಸಿದೆ.ಈ ವೇಳೆ ಪ್ರಾಣ ಉಳಿಸಿಕೊಳ್ಳಲು ವ್ಯಕ್ತಿಯೊರ್ವ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾರೆ.

ಬೆಂಕಿ ಅವಘಡದ ಪರಿಣಾಮ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದ್ದು, ಭಾರಿ ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ಆರಿಸಲು ಹರಸಾಹಸಪಟ್ಟರು.

ಇನ್ನು ಈ ಪ್ರದೇಶದಲ್ಲಿದ್ದ ಜನರಿಗೆ ಭಾರಿ ಸ್ಫೋಟದ ಶಬ್ಧ ಕೇಳಿಸಿದ್ದು, ಕೂಡಲೇ ಕಟ್ಟಡದಿಂದ ದಟ್ಟ ಹೊಗೆ ಆವರಿಸಿದೆ. ಕಟ್ಟಡದ ಮೇಲ್ಭಾಗದಲ್ಲಿ ಐದಾರು ಗ್ಯಾಸ್ ಗಳು ಇದ್ದವು ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಸದ್ಯ ಸಮೀಪದ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ಜನರ ರಕ್ಷಣೆಗೆ ಧಾವಿಸಿದೆ. 

See also  ಸುಡು ಬಿಸಿಲಿಗೆ ಬೆಂಗಳೂರಿನಲ್ಲಿ ತಂಪೆರೆದ ಮಳೆರಾಯ..! ಮಧ್ಯಾಹ್ನ 3 ಗಂಟೆಯಿಂದ ಗುಡುಗು ಸಹಿತ ಮಳೆ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget