Latestಕ್ರೈಂರಾಜ್ಯವೈರಲ್ ನ್ಯೂಸ್

ಅನ್ನಕ್ಕೆ ವಿಷ ಹಾಕಿ ಇಡೀ ಕುಟುಂಬವನ್ನೇ ಮುಗಿಸಲು ಯತ್ನಿಸಿದಾಕೆ ಅರೆಸ್ಟ್‌..! ಗಂಡ, ಮಕ್ಕಳು, ಅತ್ತೆ-ಮಾವನ ಆಹಾರಕ್ಕೆ ವಿಷಯುಕ್ತ ಮಾತ್ರೆ ಹಾಕಿದ್ದ ಕ್ರೂರಿ..!

781

ನ್ಯೂಸ್ ನಾಟೌಟ್: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ತನ್ನ ಕುಟುಂಬಸ್ಥರಿಗೆ ಚಟ್ಟಕಟ್ಟಲು ಯತ್ನಿಸಿದ್ದಾಕೆಯನ್ನ ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕೆರಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅನ್ನಕ್ಕೆ ವಿಷ ಹಾಕಿ ಪತಿ, ಮಕ್ಕಳು ಹಾಗೂ ಅತ್ತೆ-ಮಾವನ ಕೊಲೆಗೆ ಯತ್ನಿಸಿದ್ದ ಆರೋಪಿ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ಚೈತ್ರಾ (33) ಬಂಧಿತ ಮಹಿಳೆ ಎಂದು ಗುರುತಿಸಲಾಗಿದೆ.

11 ವರ್ಷಗಳ ಹಿಂದೆ ಗಜೇಂದ್ರ ಎಂಬವರೊಂದಿಗೆ ಚೈತ್ರಾ ವಿವಾಹವಾಗಿದ್ದಳು. ಕೆಲ ವರ್ಷಗಳ ಕಾಲ ಎಲ್ಲವೂ ಚೆನ್ನಾಗಿಯೇ ಇತ್ತು. ದಂಪತಿಗೆ ಇಬ್ಬರು ಗಂಡು ಮಕ್ಕಳೂ ಇದ್ದಾರೆ. ಆದರೆ ಕಳೆದ 3 ವರ್ಷಗಳಿಂದ ಸಣ್ಣ-ಪುಟ್ಟ ವಿಚಾರಕ್ಕೂ ಚೈತ್ರಾ ಗಂಡನೊಂದಿಗೆ ಜಗಳವಾಡುತ್ತಿದ್ದಳು. ಈ ನಡುವೆಯೇ ಚೈತ್ರಾಳಿಗೆ ಪುನೀತ್‌ ಎಂಬಾತ ಪರಿಚಯವಾಗಿದ್ದ. ಇಬ್ಬರಿಗೂ ಸಲುಗೆ ಬೆಳೆದಿತ್ತು. ಹೀಗಾಗಿ ಪುನೀತ್‌ ಜೊತೆಗೆ ಚೈತ್ರಾ ಅನೈನಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಚೈತ್ರ-ಪುನೀತ್ ನಡುವಿನ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ ಗಜೇಂದ್ರ ಈ ವಿಚಾರವನ್ನ ಚೈತ್ರಾಳ ತಂದೆ-ತಾಯಿಗೆ ತಿಳಿಸಿದ್ದ. ಕೊನೆಗೆ ಕುಟುಂಬಸ್ಥರು ರಾಜಿ ಪಂಚಾಯ್ತಿ ಮಾಡಿದ್ದರು. ಬಳಿಕ ದಂಪತಿ ಸರಿ ಹೋಗಿದ್ದರು ಎನ್ನಲಾಗಿದೆ. ಪುನಃ ಕೆಲ ದಿನಗಳಿಂದ ಅದೇ ಗ್ರಾಮದ ಶಿವು ಎಂಬಾತನೊಂದಿಗೆ ಚೈತ್ರಾ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯ ಕುಟುಂಬಸ್ಥರಿಗೆ ತಿಳಿಯುವ ಮುನ್ನ ಹಾಗೂ ತನ್ನ ಅಕ್ರಮ ಸಂಬಂಧಕ್ಕೆ ಗಂಡ, ಮಕ್ಕಳು, ಅತ್ತೆ-ಮಾವ ಅಡ್ಡಿಯಾಗುತ್ತಾರೆ ಎಂಬ ಅನುಮಾನದಿಂದ ಎಲ್ಲರನ್ನೂ ಸಾಮೂಹಿಕವಾಗಿ ಮುಗಿಸುವ ಪ್ಲಾನ್ ಹಾಕಿದ್ದಳು.

ಪತಿ ಹಾಗೂ ಅವರ ಕುಟುಂಬದವರಿಗೆ ತಿಳಿಯದಂತೆ ಊಟ-ತಿಂಡಿಯಲ್ಲಿ ವಿಷಯುಕ್ತ ಮಾತ್ರೆಗಳನ್ನು ಹಾಕುತ್ತಿದ್ದಳು. ಇದಕ್ಕೆ ಪ್ರಿಯಕರ ಶಿವು ಸಹಕಾರ ನೀಡಿದ್ದ. ಈ ವಿಷಯ ತಿಳಿದು ಪತಿ ಗಜೇಂದ್ರ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ಬಳಿಗ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದಾರೆ.  

ನೆಲ್ಯಾಡಿ: ಬಸ್ ಪಲ್ಟಿಯಾಗಿ‌ 10ಕ್ಕೂ ಹೆಚ್ಚು ಮಂದಿಗೆ ಗಾಯ..! ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್..!

ಬಂಟ್ವಾಳ:13ನೇ ವಯಸ್ಸಿಗೆ ಮನೆ ಬಿಟ್ಟಿದ್ದ ವ್ಯಕ್ತಿ 62 ವರ್ಷಗಳ ಬಳಿಕ ವಾಪಸ್‌..!ಅಷ್ಟಕ್ಕೂ ಇಷ್ಟು ವರ್ಷ ಎಲ್ಲಿದ್ದರು? ಏನು ಮಾಡುತ್ತಿದ್ದರು?

See also  ಸೌತಡ್ಕ ಶ್ರೀ ಮಹಾಗಣಪತಿಗೆ 75 ಕೆ.ಜಿ ತೂಕದ ಗಂಟೆ ಸಮರ್ಪಣೆ, ಪುತ್ತೂರಿನ ಉದ್ಯಮಿಯಿಂದ ಹರಕೆ ಸಲ್ಲಿಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget