ಕ್ರೈಂವೈರಲ್ ನ್ಯೂಸ್

ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹುಲಿ ದಾಳಿ..! ಹುಲಿಯನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಘಟನೆ..!

ನ್ಯೂಸ್‌ ನಾಟೌಟ್: ಸುಂದರಬನ್ಸ್‌ ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಹುಲಿ ದಾಳಿ ನಡೆಸಿದ ಘಟನೆ ನಡೆದಿದೆ. ಹುಲಿ ದಾಳಿಗೊಳಗಾದ ಅರಣ್ಯ ಇಲಾಖೆ ನೌಕರನನ್ನು ತಕ್ಷಣ ಸಹೋದ್ಯೋಗಿಗಳು ರಕ್ಷಿಸಿದ್ದಾರೆ.
ಸುಂದರಬನ್ಸ್‌ ಅಭಯಾರಣ್ಯದಲ್ಲಿ ಸೋಮವಾರ(ಫೆ.10) ಬೆಳಿಗ್ಗೆ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಅಜ್ಮಲ್ಮರಿ ಅರಣ್ಯಕ್ಕೆ ಅಟ್ಟಲು ಯತ್ನಿಸುತ್ತಿದ್ದರು. ಈ ವೇಳೆ ನೌಕರನ ಮೇಲೆ ಹುಲಿ ದಾಳಿ ಮಾಡಿದೆ.

ಎಂಟರಿಂದ ಹತ್ತು ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಮತ್ತೆ ಕಾಡಿಗೆ ಓಡಿಸಲು ಪ್ರಯತ್ನಿಸುತ್ತಿದ್ದರು. ಇದ್ದಕ್ಕಿದ್ದಂತೆ ಹುಲಿ ಸಿಬ್ಬಂದಿ ಕಡೆಗೆ ಬಂದಿದೆ. ಈ ವೇಳೆ ಅವರು ಕಿರುಚಿದ್ದಾರೆ. ಈ ವೇಳೆ ಹುಲಿ ಒಬ್ಬರ ಮೇಲೆ ಎರಗಿದೆ. ಅಷ್ಟರಲ್ಲೇ ಅಲ್ಲೇ ಇದ್ದ ಸಹೋದ್ಯೋಗಿಗಳು ಕೋಲುಗಳಿಂದ ಹುಲಿಗೆ ಬಡಿದಿದ್ದಾರೆ. ಈ ವೇಳೆ ಹುಲಿ ಆ ವ್ಯಕ್ತಿಯನ್ನು ಬಿಟ್ಟು ಕಾಡಿಗೆ ಓಡಿಹೋಗಿದೆ.

ದೇಹದ ಮೇಲೆ ಹಲವಾರು ಗಾಯಗಳಾಗಿವೆ. ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಶಿಫಾರಸು ಮಾಡಿದರೆ, ನಾವು ಅವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ಸ್ಥಳಾಂತರಿಸುತ್ತೇವೆ. ಘಟನೆಯಲ್ಲಿ ಓರ್ವ ಸಿಬ್ಬಂದಿ ಹೊರತುಪಡಿಸಿ ಮತ್ಯಾರಿಗೂ ಗಾಯಗಳಾಗಿಲ್ಲ ಎಂದು ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್‌ಒ) ನಿಶಾ ಗೋಸ್ವಾಮಿ ತಿಳಿಸಿದ್ದಾರೆ.

Click

ಬಸ್ ನಲ್ಲಿ ಆಹಾರ ಚೆಲ್ಲಿದ್ದಕ್ಕೆ ವ್ಯಕ್ತಿಯನ್ನು ಥಳಿಸಿ ವಿಕೃತವಾಗಿ ಕೊಂದ ಕ್ರೂರಿಗಳು..! ರಾತ್ರೋರಾತ್ರಿ ಮೇಲ್ಸೇತುವೆಯಿಂದ ಕೆಳಕ್ಕೆಸೆದು ಪರಾರಿ..!

ಕುಂಭಮೇಳಕ್ಕೆ ಬಂದ ನಾಗ ಸಾಧುಗಳು ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ್ರಾ..? ಇಲ್ಲಿದೆ ವೈರಲ್ ವಿಡಿಯೋ

ವೇದಿಕೆಯಲ್ಲಿ ಕುಣಿಯುತ್ತಿದ್ದ ಯುವತಿ ಕುಸಿದುಬಿದ್ದು ಸಾವು..! ಆಕೆಯ ಸಹೋದರಿಯೂ 12ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಳು..! ಇಲ್ಲಿದೆ ವೈರಲ್ ವಿಡಿಯೋ

ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ..! ಮಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ..? ನಾಲ್ವರು ಅರೆಸ್ಟ್..!

Related posts

ಪರೀಕ್ಷೆ ಬರೆಯಲು ಬಂದವನನ್ನು ಕಾಲೇಜು ಆವರಣದಲ್ಲಿ ಹೊಡೆದು ಕೊಂದ ಯುವಕರು..! 1 ವರ್ಷದಿಂದ ಕೆಟ್ಟುಹೋಗಿತ್ತು ಕಾನೂನು ಕಾಲೇಜಿನ ಸಿಸಿಟಿವಿ..!

ರಕ್ಷಾ ಬಂಧನಕ್ಕೆ ತವರಿಗೆ ಹೋಗಲು ಹಠ ಹಿಡಿದ ಪತ್ನಿ..! ಗಂಡ-ಹೆಂಡತಿ ಜಗಳದಲ್ಲಿ ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಗಂಡ..! ಮುಂದೇನಾಯ್ತು..?

1984ರ ಭೋಪಾಲ್ ದುರಂತದ ವಿಷಕಾರಿ ಅವಶೇಷಗಳು ಇಂದು(ಡಿ.29) ಸಾಗಾಣಿಕೆ..! 337 ಟನ್ ಅಪಾಯಕಾರಿ ತ್ಯಾಜ್ಯಗಳನ್ನು ವಿಲೇವಾರಿ ಮಾಡುವಂತೆ ಹೈಕೋರ್ಟ್ ಆದೇಶ