ನ್ಯೂಸ್ ನಾಟೌಟ್: ಖ್ಯಾತ ಡೈರೆಕ್ಟರ್ ತರುಣ್ ಸುಧೀರ್ ಅವರು ತುಮಕೂರಿನ ನಾಮದ ಚಿಲುಮೆಯಲ್ಲಿ ಅನುಮತಿ ಇಲ್ಲದೇ ಅರಣ್ಯ ಭೂಮಿಯಲ್ಲಿ ಸಿನಿಮಾದ ಚಿತ್ರೀಕರಣ ನಡೆಸಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಹಾಯಕ ಸಂರಕ್ಷಣಾಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದ ಶೂಟಿಂಗ್ ಲೈಟ್ ಸೇರಿದಂತೆ ಕೆಲ ಸಾಮಾಗ್ರಿಗಳನ್ನು ಸೀಜ್ ಮಾಡಲಾಗಿದೆ ಎಮದು ತಿಳಿದು ಬಂದಿದೆ.
ತರುಣ್ ಸುಧೀರ್ ನಿರ್ಮಾಣದ ಇನ್ನೂ ಹೆಸರಿಡದ ಚಿತ್ರದ ಶೂಟಿಂಗ್ ಅರಣ್ಯ ಭೂಮಿಯಲ್ಲಿ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ತುಮಕೂರಿನ ಸಹಾಯಕ ಸಂರಕ್ಷಣಾಧಿಕಾರಿಗಳ ತಂಡ ದಾಳಿ ನಡೆಸಿದೆ. ಕಳೆದ 5 ದಿನಗಳಿಂದ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಸ್ಥಳದಲ್ಲಿದ್ದ ಶೂಟಿಂಗ್ ಲೈಟ್, ಅಡುಗೆ ಸಾಮಾಗ್ರಿಗಳು, ಚೇರ್ ಗಳು ಸೇರಿದಂತೆ ಟಿಟಿ ವಾಹನವನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.ಅಂದಹಾಗೆ, ಈ ಚಿತ್ರವು ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಹೊಸ ಸಿನಿಮಾ ಆಗಿದ್ದು, ತರುಣ್ ಸುಧೀರ್ ನಿರ್ಮಾಣ ಮಾಡುತ್ತಿದ್ದಾರೆ.