ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿಯ ಪ್ರಧಾನ ಕಾರ್ಯದರ್ಶಿಯಾಗಿ ಆರ್ ಬಿಐ ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ನೇಮಕ ಮಾಡಲಾಗಿದೆ ಸರ್ಕಾರದ ಅಧಿಸೂಚನೆ ತಿಳಿಸಿದೆ.
ಶಕ್ತಿಕಾಂತ್ ದಾಸ್ ನೇಮಕಾತಿ ಪ್ರಧಾನ ಮಂತ್ರಿಯ ಅವಧಿಯವರೆಗೆ ಇರಲಿದೆ ಎಂದು ಕ್ಯಾಬಿನೆಟ್ನ ನೇಮಕಾತಿ ಸಮಿತಿ ಹೇಳಿದೆ.
ಸರ್ಕಾರದ ಥಿಂಕ್ ಟ್ಯಾಂಕ್ ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಅವಧಿಯನ್ನು ಸಹ ವಿಸ್ತರಿಸಲಾಗಿದೆ. 1987-ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಯನ್ನು 2023ರ ಫೆಬ್ರವರಿಯಲ್ಲಿ ಎರಡು ವರ್ಷಗಳ ಕಾಲ ನೀತಿ ಆಯೋಗ ಸಿಇಒ ಆಗಿ ನೇಮಿಸಲಾಗಿತ್ತು.
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಆರ್ಬಿಐ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಭಾರತದ ಆರ್ಥಿಕ ಸ್ಥಿರತೆಯನ್ನು ಬಲಪಡಿಸಲು ಹಲವಾರು ಕ್ರಮಗಳನ್ನು ತಂದಿದ್ದರು.