ಕರಾವಳಿಕ್ರೈಂ

ಮಂಗಳೂರು: ಇನ್ಸ್ಟಾಗ್ರಾಮ್ ಗೆಳತಿ ಕರೆದಳೆಂದು ನಂಬಿ ಹೋದ ಯುವಕನ ಮೇಲೆ ಚೂರಿಯಿಂದ ಇರಿದು ಹಲ್ಲೆ ಮಾಡಿದ ನಾಲ್ವರ ಬಂಧನ

ನ್ಯೂಸ್‌ ನಾಟೌಟ್‌: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಯುವತಿ ಕರೆದಳೆಂದು ಹೋದ ಯುವಕನ ಮೇಲೆ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಕದ್ರಿ ಮಲ್ಲಿಕಟ್ಟೆ ನಿವಾಸಿ ಮೊಹಮ್ಮದ್ ತುಫೈಲ್ (20), ನೀರುಮಾರ್ಗ ನಿವಾಸಿ ಮೊಹಮ್ಮದ್ ಅಫ್ರಿದ್ (19), ಮಕ್ಸುದ್ ಸಾಗ್ (21), ಬೋಳಾರ ಮುಳಿಹಿತ್ಲು ನಿವಾಸಿ ಅಬ್ದುಲ್ ಸತ್ತಾರ್ (19) ಎಂದು ಗುರುತಿಸಲಾಗಿದೆ.

ಜೂನ್ 16ರಂದು ರಾತ್ರಿ 9.45ರ ಸಮಯಕ್ಕೆ ಮಂಗಳೂರಿನ ಅಲೋಶಿಯಸ್ ಕಾಲೇಜು ಬಳಿ ಕಿನ್ನಿಗೋಳಿ ಏಳಿಂಜೆ ನಿವಾಸಿ ಪ್ರಿಯಾ ಪಿಂಟೋ ಎಂಬಾಕೆಯು ಇನ್ಸ್ಟಾಗ್ರಾಮ್‌ನಲ್ಲಿ ನಿದೀಶ್ ಎಂಬಾತನನ್ನು ಸಂಪರ್ಕ ಮಾಡಿ ಮಾತನಾಡಲು ಬರುವಂತೆ ತಿಳಿಸಿದ್ದಾಳೆ. ನಿದೀಶ್ ತನ್ನಿಬ್ಬರು ಸ್ನೇಹಿತರೊಂದಿಗೆ ಸ್ಥಳಕ್ಕೆ ಬಂದಾಗ ಕಾರಿನಲ್ಲಿ ಬಂದ ಪ್ರಿಯಾ ಮತ್ತು ಆಕೆಯ ಜತೆಯಲ್ಲಿದ್ದ ನಾಲ್ವರು ಆರೋಪಿಗಳು ನಿದೀಶ್ ಮತ್ತು ಸ್ನೇಹಿತರ ಜತೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ನಾಲ್ವರು ಆರೋಪಿಗಳು ನಿದೀಶ್‌ನಿಗೆ ಹೊಡೆದು, ಎದೆಯ ಎಡಭಾಗಕ್ಕೆ ಚೂರಿಯಿಂದ ಇರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ನಿದೀಶ್‌ನ ಸ್ನೇಹಿತರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ನಿದೀಶ್ ಸ್ನೇಹಿತ ನೀಲೆಶ್ ಎಂಬಾತ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ಶುಕ್ರವಾರ ಸಂಜೆ ನಗರದ ಕುಡುಪು ಬೈತುರ್ಲಿ ಪಕ್ಕದ ಫ್ಲ್ಯಾಟ್‌ನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ತನಿಖಾಧಿಕಾರಿಗಳ ಮುಂದೆ ಹಾಜರುಪಡಿದ್ದಾರೆ.

Related posts

ರಾತ್ರೋರಾತ್ರಿ ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಹತ್ಯೆ..! ತನ್ನದೇ ಮದುವೆಯ ಆಮಂತ್ರಣ ಪತ್ರಿಕೆ ಹಂಚಿ ಬರುತ್ತಿದ್ದ ವೇಳೆ ದಾಳಿ..!

ವಿದೇಶ ಪ್ರಯಾಣ: ಟಿ.ಎಂ. ಶಾಝ್ ತೆಕ್ಕಿಲ್ ಗೆ ಬೀಳ್ಕೊಡುಗೆ ಸಮಾರಂಭ

ಕೊರಗಜ್ಜನಿಗೆ ನ್ಯಾಯ ಕೊಡಿಸಲು ಬಿಜೆಪಿಯವರಿಗೆ ಸಾಧ್ಯವಿಲ್ಲ, ಚೌಟಗೆ ಚಿವುಟಿದ ಪುತ್ತೂರು ಶಾಸಕ ಅಶೋಕ್ ರೈ