ಕ್ರೈಂ

ದೀಪಾವಳಿ ಹಬ್ಬದಂದೇ ಶಾಕ್‌: 4 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ದಿನದಂದೇ ರಾಜ್ಯದ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಮೂವರು ಸಾವಿಗೆ ಶರಣಾದ ಘಟನೆ ಬುಧವಾರ ನಡೆದಿದೆ.

ಗ್ರಾಮದ ಮಲ್ಲಪ್ಪ ಗೋವಿಂದಪ್ಪ ಗಡಾದ್ (26), ಸುಧಾ ಮಲ್ಲಪ್ಪ ಗಡಾದ್ (22) ಹಾಗೂ 4 ತಿಂಗಳ ಮಗು ಮೃತರು. ಗ್ರಾಮದ ತಮ್ಮ ಜಮೀನಿನಲ್ಲಿರುವ ಮನೆ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದು ಮಲ್ಲಪ್ಪ ಗಡಾದ್ ಕುತ್ತಿಗೆಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿದ್ದು, ಪತ್ನಿ ಹಾಗೂ ಮಗು ಶವ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದ ಗಜೇಂದ್ರಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದು, ಪೊಲೀಸ್ ತನಿಖೆಯಿಂದಲೇ ಘಟನೆ ವಿವರ ಹೊರಬರಬೇಕಿದೆ. ಸದ್ಯಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣವಿರಬಹುದು ಎಂದು ಹೇಳಲಾಗಿದೆ.

Related posts

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರ ಬಂಧನ

ಉಡುಪಿ: ಸಮುದ್ರದ ಅಲೆಗೆ ಕೊಚ್ಚಿಹೋದ ಇಬ್ಬರು ಯುವಕರು..! ವಿಫಲವಾದ ಸ್ಥಳೀಯರ ಪ್ರಯತ್ನ..!

ಮದುವೆ ಮಂಟಪದಿಂದ ಫೋಟೋಗ್ರಾಫರ್ ಕಿಡ್ನ್ಯಾಪ್..! ಇಬ್ಬರು ಮಹಿಳೆಯರು ಸೇರಿ 8 ಜನ ಅರೆಸ್ಟ್..!