ಕ್ರೈಂ

ದೀಪಾವಳಿ ಹಬ್ಬದಂದೇ ಶಾಕ್‌: 4 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ದಿನದಂದೇ ರಾಜ್ಯದ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಮನೆಯಲ್ಲಿ ಮೂವರು ಸಾವಿಗೆ ಶರಣಾದ ಘಟನೆ ಬುಧವಾರ ನಡೆದಿದೆ.

ಗ್ರಾಮದ ಮಲ್ಲಪ್ಪ ಗೋವಿಂದಪ್ಪ ಗಡಾದ್ (26), ಸುಧಾ ಮಲ್ಲಪ್ಪ ಗಡಾದ್ (22) ಹಾಗೂ 4 ತಿಂಗಳ ಮಗು ಮೃತರು. ಗ್ರಾಮದ ತಮ್ಮ ಜಮೀನಿನಲ್ಲಿರುವ ಮನೆ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದು ಮಲ್ಲಪ್ಪ ಗಡಾದ್ ಕುತ್ತಿಗೆಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿದ್ದು, ಪತ್ನಿ ಹಾಗೂ ಮಗು ಶವ ಮಂಚದ ಮೇಲೆ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದ ಗಜೇಂದ್ರಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದು, ಪೊಲೀಸ್ ತನಿಖೆಯಿಂದಲೇ ಘಟನೆ ವಿವರ ಹೊರಬರಬೇಕಿದೆ. ಸದ್ಯಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣವಿರಬಹುದು ಎಂದು ಹೇಳಲಾಗಿದೆ.

Related posts

ಮಂಗಳೂರು: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ವಿದ್ಯಾರ್ಥಿನಿ..! ತಲೆಗೆ ಗಂಭೀರ ಗಾಯ

ಹಾರಾಡುವಾಗ ಮನೆಯ ಮೇಲೆ ಬಿದ್ದ ವಿಮಾನದ ಬಿಡಿ ಭಾಗಗಳು..! ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ ಮನೆ ಮಾಲಿಕ..!

ರಾತ್ರೋರಾತ್ರಿ ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಮೇಲೆ ದಾಳಿ..! ಸುವರ್ಣಸೌಧದ ಮುಂಭಾಗ ಲಾರಿ ಚಾಲಕನಿಗೆ ಹಲ್ಲೆ