ಕ್ರೈಂವೈರಲ್ ನ್ಯೂಸ್

ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿ ಕೈ ಮುರಿದರಾ ಹೆಡ್‍ಮಾಸ್ಟರ್! ಏನಿದು ಶಿಕ್ಷಕಿಯ ಅಮಾನವೀಯ ವರ್ತನೆ?

186

ನ್ಯೂಸ್ ನಾಟೌಟ್: ಶಿಕ್ಷಕರು ಧರ್ಮಾತೀತವಾಗಿ ಮಕ್ಕಳಲ್ಲಿ ಎಲ್ಲರೂ ಸಮಾನರು ಎಂಬ ರೀತಿಯಲ್ಲಿ ನಡೆದುಕೊಳ್ಳುವುದು ಅಗತ್ಯ, ಆದರೆ, ಇತ್ತೀಚೆಗೆ ಶಿಕ್ಷಕರು ಅಮಾನವೀಯವಾಗಿ ಮತ್ತು ಧರ್ಮಾಂಧರಾಗಿ ನಡೆದುಕೊಳ್ಳುತ್ತಿರುವುದು ವಿಚಿತ್ರ. ಕೆಜಿಎಫ್‍ನ ಶಾಲೆಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿನಿಯ ಕೈಯನ್ನು ಹೆಡ್‍ಮಾಸ್ಟರ್ ಮುರಿದ ಅಮಾನವೀಯ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಅಲ್ಲಿಕಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ವಾರ ಈ ಘಟನೆ ನಡೆದಿತ್ತು. ಮುಖ್ಯ ಶಿಕ್ಷಕಿಯು ವಿದ್ಯಾರ್ಥಿನಿ ಭವ್ಯಶ್ರೀ ಥಳಿಸಿ ಎಡ ಕೈ ಮುರಿದಿದ್ದರು. ಈ ಸಂಬಂಧ ಪೋಷಕರು ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ದೂರು ಸಲ್ಲಿಸಿದ್ದರು ಎನ್ನಲಾಗಿದೆ.

ಕೆಜಿಎಫ್ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ಪೋಷಕರು ದೂರು ನೀಡಿದ್ದರು. ಹೀಗಾಗಿ ಶಿಕ್ಷಣಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯ ಯೋಗ ಕ್ಷೇಮ ವಿಚಾರಿಸಿದ್ದರು. ಮುಖ್ಯ ಶಿಕ್ಷಕಿ ಹೇಮಲತಾರನ್ನ ವರ್ಗಾವಣೆ ಮಾಡುವಂತೆ ಪೋಷಕರ ಪಟ್ಟು ಹಿಡಿದಿದ್ದರು.

ಈ ವೇಳೆ ಶಿಕ್ಷಣಾಧಿಕಾರಿ ಮುನಿವೆಂಕಟ ರಾಮಾಚಾರಿ ಶಾಲಾ ಮಕ್ಕಳ ಪೋಷಕರಿಗೆ ಭರವಸೆ ನೀಡಿದ್ದರು. ಅಂತೆಯೇ ಇದೀಗ ಮುಖ್ಯ ಶಿಕ್ಷಕಿಯ ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಕೋಲಾರ ಡಿಡಿಪಿಐ ಕೃಷ್ಣಮೂರ್ತಿಯವರು ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಬಾಲಕಿಯ ಚಿಕಿತ್ಸೆಗೆ ತಗುಲುವ ಖರ್ಚು ವೆಚ್ಚವನ್ನು ಕೂಡ ಮುಖ್ಯ ಶಿಕ್ಷಕಿಯೇ ಭರಿಸಬೇಕೆಂದು ಸೂಚನೆ ನೀಡಲಾಗಿದೆ.

See also  ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ತಲೆಬುರುಡೆ ಹಾಗೂ ಬ್ಯಾಗ್‌ ಪತ್ತೆ, ಕೊಂಬೆಯಲ್ಲಿ ನೇತಾಡುತ್ತಿದ್ದ ಬಟ್ಟೆ..! ಸುಬ್ರಹ್ಮಣ್ಯ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ರಕ್ಷಿತಾರಣ್ಯದಲ್ಲಿ ಏನಿದು ನಿಗೂಢ ರಹಸ್ಯ..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget