Latestಕ್ರೈಂರಾಜ್ಯವೈರಲ್ ನ್ಯೂಸ್

ಬಾಲಕಿಗೆ ತಾಳಿ ಕಟ್ಟಿಸಿಕೊಳ್ಳುವಂತೆ ಬಲವಂತ ಮಾಡಿದ ಐವರು ಅರೆಸ್ಟ್..! ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವರ್ಗಾವಣೆ..!

361
Pc Cr: Vartha bharati

ನ್ಯೂಸ್ ನಾಟೌಟ್: ಬುಡಕಟ್ಟು ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕಿಗೆ ತಾಳಿ ಕಟ್ಟಿಸಿಕೊಳ್ಳುವಂತೆ ಬಲವಂತ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು, ಈ ಘಟನೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿತ್ತು.

ಚಳ್ಳಕೆರೆ ತಾಲೂಕು ಕೇಂದ್ರದ ಶಾಲೆಯೊಂದರಲ್ಲಿ ಎಂಟನೇಯ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯನ್ನು ಕುಟುಂಬಸ್ಥರೇ ಬಲವಂತವಾಗಿ ಕೃಷ್ಣ ಎಂಬ ಯುವಕನ ಜೊತೆ ಮದುವೆ ಮಾಡಲು ಮುಂದಾಗಿದ್ದರು ಎಂದು ವರದಿ ತಿಳಿಸಿದೆ.

ʼನನ್ನನ್ನು ಕಾಪಾಡಿ, ಈ ಮದುವೆ ನನಗೆ ಬೇಡ, ಎಂದು ಬಾಲಕಿ ರಸ್ತೆಯಲ್ಲಿ ಬಿದ್ದು ಒದ್ದಾಡಿದರೂ, ಮದುವೆ ಮಾಡಬೇಕೆಂದು ಪಟ್ಟು ಹಿಡಿದಿರುವ ಪೋಷಕರು, ಬಾಲಕಿಯನ್ನು ಹೊಡೆದು ಎಳೆದಾಡಿದ್ದರು.

ವಿಡಿಯೋ ವೈರಲ್‌ ಬೆನ್ನಲ್ಲೇ ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯರಾದ ಡಾ.ತಿಪ್ಪೇಸ್ವಾಮಿ, ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು, ಬಾಲಕಿಗೆ ತಾಳಿ ಕಟ್ಟಿಸಿಕೊಳ್ಳುವಂತೆ ಬಲವಂತ ಮಾಡಿದ ಐವರನ್ನು ಬಂಧಿಸಿದ್ದಾರೆ.
ಇದಲ್ಲದೇ ಕರ್ತವ್ಯ ಲೋಪ, ನಿರ್ಲಕ್ಷ್ಯ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಬಣಕಾರ, ಪವಿತ್ರ ಮತ್ತಿತರ ಅಧಿಕಾರಿಗಳನ್ನು ಸರಕಾರ ವರ್ಗಾವಣೆ ಮಾಡಿದ್ದಾರೆ.  

ಚಾಕು ನುಂಗಿ ಒದ್ದಾಡಿದ ನಾಗರ ಹಾವು..! ಹಾವನ್ನು ರಕ್ಷಿಸಿದ್ದೇ ರೋಚಕ..!

See also  ಮೀನು ಹಿಡಿಯಲು ಹೋದ ಯುವಕ ಕರೆಂಟ್ ಶಾಕ್ ಹೊಡೆದು ಸಾವು
  Ad Widget   Ad Widget   Ad Widget   Ad Widget   Ad Widget   Ad Widget   Ad Widget