ಬೆಂಗಳೂರು

ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಹೃದಯ ಗೆದ್ದ ಕ್ರಿಕೆಟ್‌ ದೇವರು..!, ಅಭಿಮಾನಿಗಳಿಗೆ ಸಚಿನ್ ತೆಂಡೂಲ್ಕರ್‌ ಹೇಳಿದ್ದೇನು?

151

ನ್ಯೂಸ್‌ ನಾಟೌಟ್‌ : ಬೆಂಗಳೂರಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಒನ್​ ವರ್ಲ್ಡ್ ಒನ್ ಫ್ಯಾಮಿಲಿ ಕಪ್​ ವಿಶೇಷ ಕ್ರಿಕೆಟ್ ಪಂದ್ಯ ನಡೆಯುತ್ತಿದೆ.ಈ ಪಂದ್ಯಾಟಕ್ಕೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಆಗಮಿಸಿ ಕನ್ನಡದಲ್ಲೇ ಮಾತು ಆರಂಭಿಸಿ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಒನ್​ ವರ್ಲ್ಡ್ ಒನ್ ಫ್ಯಾಮಿಲಿ ಕಪ್​ ವಿಶೇಷ ಕ್ರಿಕೆಟ್ ಪಂದ್ಯಕ್ಕೆ ಕರ್ನಾಟಕಕ್ಕೆ ಆಗಮಿಸಿರುವ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್​ ಅವರು ‘ಎಲ್ಲರಿಗೂ ನಮಸ್ಕಾರ’ ಎಂದು ಕನ್ನಡದಲ್ಲಿಯೇ  ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರರಾದರು.

ಹೌದು, ಸಚಿನ್ , ಎಲ್ಲರಿಗೂ ನಮಸ್ಕಾರ ಎಂದು ಹೇಳುವ ಮೂಲಕ ಕರ್ನಾಟಕದ ಜನತೆ ಎದುರು ಕನ್ನಡದಲ್ಲಿಯೇ ಮಾತನಾಡಿದರು. ಈ ವೇಳೆ ಈ ಪಂದ್ಯದ ಬಗ್ಗೆ ಹಾಗೂ ಅದರ ಹಿಂದಿನ ಉದ್ದೇಶದ ಬಗ್ಗೆ ಮಾತನಾಡಿದ ತೆಂಡೂಲ್ಕರ್, ಇಲ್ಲಿ ಯುವಕರು, ಮಕ್ಕಳು ಎಲ್ಲರೂ ನೆರೆದಿದ್ದೀರಿ. ನೀವು ಯಾವುದೇ ಕಾರಣಕ್ಕೂ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಭಾರತ ದೇಶದಲ್ಲಿ ಎಲ್ಲರೂ ಸಹ ಇನ್ನಷ್ಟು ಫಿಟ್​ ಆಗಿ ಇರಬೇಕು ಎಂದು ಸಲಹೆ ನೀಡಿದರು.

See also  ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..! ಶೇ.27ರಷ್ಟು ವೇತನ ಹೆಚ್ಚಳಕ್ಕೆ ಮುಂದಾದ ಸರ್ಕಾರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget