ನ್ಯೂಸ್ ನಾಟೌಟ್: ಬಿಗ್ ಬಾಸ್ (Bigg Boss Kannada-11) ಮನೆಯಿಂದ ಅನಿರೀಕ್ಷಿತವಾಗಿ ಅರ್ಧದಲ್ಲೇ ಆಚೆ ಬಂದಿದ್ದಕ್ಕೆ ಕೊನೆಗೂ ಗೋಲ್ಡ್ ಸುರೇಶ್ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ತಮ್ಮದೇ ಆದ ಆಟದಿಂದ ಗಮನ ಸೆಳೆದಿದ್ದ ಸುರೇಶ್ ಅರ್ಧದಲ್ಲೇ ಮನೆ ಬಿಟ್ಟು ಆಚೆ ಬಂದಿದ್ದರು. ಅವರು ಹೊರಗೆ ಬಂದ ಕಾರಣಕ್ಕೆ ನಾನಾ ರೀತಿಯ ಮಾತುಗಳು ಕೇಳಿ ಬಂದಿತ್ತು.
ಅವರ ತಂದೆ ನಿ* ಧನರಾಗಿದ್ದಾರೆ ಎನ್ನುವ ಮಾತುಗಳು ಹರಿದಾಡಿತ್ತು. ಇದೀಗ ಸುರೇಶ್ ʼಕಲರ್ಸ್ ಕನ್ನಡʼ ಲೈವ್ ನಲ್ಲಿ ಬಂದು ಮಾತನಾಡಿ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.
“ಬಿಗ್ ಬಾಸ್ ಮನೆಗೆ ಹೋಗುವ ಮುನ್ನ ನನ್ನ ಪತ್ನಿಗೆ ನನ್ನ ಬ್ಯುಸಿನೆಸ್ ನೋಡಿಕೊಳ್ಳಲು ಹೇಳಿ ಹೋಗಿದ್ದೆ. ನಾನು ನನ್ನದೇ ಆದ ಬ್ಯುಸಿನೆಸ್ ಮಾಡುತ್ತಿದ್ದೇನೆ. ಅದನ್ನು ನಾನೇ ನೋಡಿಕೊಳ್ಳುತ್ತಿದ್ದೆ. ಆದರೆ ನನ್ನ ಪತ್ನಿಗೆ ಬ್ಯುಸಿನೆಸ್ ಹ್ಯಾಂಡಲ್ ಮಾಡಲು ಆಗಿಲ್ಲ. ಕೆಲಸ ಒತ್ತಡದಿಂದಾಗಿ ಅದು ಅವರಿಂದ ಸಾಧ್ಯವಾಗಿಲ್ಲ. ಅವರಿಗೆ ಗೊಂದಲ ಉಂಟಾಗಿತ್ತು. ಹಾಗಾಗಿ ನಾನು ಹೊರಗೆ ಬಂದು ಅದನ್ನು ನೋಡಿಕೊಳ್ಳಬೇಕಿತ್ತು. ಹಾಗಾಗಿ ಹೊರಗಡೆ ಬರಬೇಕಾಯಿತು ಎಂದು ಸುರೇಶ್ ಹೇಳಿದ್ದಾರೆ.
Click