ಕರಾವಳಿಕೊಡಗುಕ್ರೈಂಪುತ್ತೂರು

ಚಿನ್ನದಂಗಡಿ ಶುಭಾರಂಭ ದಿನವೇ ಮಾಲೀಕ ಸಾವು ಪ್ರಕರಣ: ಕೊನೆಗೂ ಪೋಸ್ಟ್ ಮಾರ್ಟಮ್ ವರದಿಯಿಂದ ಹೊರಬಿತ್ತು ಸತ್ಯ ಸಂಗತಿ!

279

ನ್ಯೂಸ್ ನಾಟೌಟ್ : ಚಿನ್ನದ ಅಂಗಡಿಯ ಉದ್ಘಾಟನೆಯ ದಿನದಂದೇ ಮಾಲೀಕ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾಗಿತ್ತು.ಬೆಳ್ತಂಗಡಿಗೆಂದು ಹೋದವರು ಗುಂಡ್ಯ ಸಮೀಪಿಸುತ್ತಿದ್ದಂತೆ ಕೆಂಪು ಹೊಳೆಯಲ್ಲಿ ಬೈಕ್ ಅಪಘಾತಕ್ಕೀಡಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಇದು ಸಾವು ಹಲವು ಅನುಮಾನಗಳಿಗೂ ಎಡೆ ಮಾಡಿ ಕೊಟ್ಟಿತ್ತು. ಇದೀಗ ಮೃತಪಟ್ಟ ನಾಗಪ್ರಸಾದ್ ರವರ ಪೋಸ್ಟ್ ಮಾರ್ಟಂ ವರದಿ ಬಂದಿದ್ದು ಸಹಜ ರಸ್ತೆ ಅಪಘಾತಕ್ಕೆ ಬಲಿಯಾಗಿರುವುದಾಗಿ ತಿಳಿದು ಬಂದಿದೆ.ಕಡಬ ತಾಲೂಕಿನ ಮರ್ದಾಳದ ಮಸೀದಿ ಬಿಲ್ಡಿಂಗ್ ನಲ್ಲಿ ಕಡಬ ನಿವಾಸಿಯಾಗಿರುವ ದಯಾನಂದ ಆಚಾರ್ಯ ಪುತ್ರ ನಾಗಪ್ರಸಾದ್ ಮಾಲೀಕತ್ವದ ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದ ಅಂಗಡಿ ಜೂ.22 ರಂದು ಉದ್ಘಾಟನೆಯಾಗಬೇಕಿತ್ತು.

ಮುಂಜಾನೆ ನಾಗಪ್ರಸಾದ್ ಸಕಲೇಶಪುರ ಠಾಣಾ ವ್ಯಾಪ್ತಿಯ ಗುಂಡ್ಯ ಕೆಂಪುಹೊಳೆ ಸಮೀಪ ಶವವಾಗಿ ಪತ್ತೆಯಾಗಿದ್ದರು. ಘಟನೆ ಬಗ್ಗೆ ಸಾರ್ವಜನಿಕವಾಗಿ ಹಲವು ಅನುಮಾನಗಳಿದ್ದ ಕಾರಣ ಪೊಲೀಸರು ಪೋಸ್ಟ್ ಮಾರ್ಟಮ್ ವರದಿಗಾಗಿ ಕಾಯುತ್ತಿದ್ದರು. ಇದೀಗ ಪೋಸ್ಟ್ ಮಾರ್ಟಮ್ ವರದಿ ಬಂದಿದ್ದು, ನಾಗಪ್ರಸಾದ್ ಅಪಘಾತದಿಂದಲೇ ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ.

https://www.youtube.com/watch?v=hnkiiNe0x6M
See also  ನಿಮಗೆ ಮತ ಹಾಕಿದ್ದೇನೆ, ನನಗೆ ಹುಡುಗಿ ಹುಡುಕಿ ಮದುವೆ ಮಾಡಿಸಿ ಎಂದು ಶಾಸಕರಿಗೆ ಮನವಿ ಮಾಡಿದ ಭೂಪ..! ಇಲ್ಲಿದೆ ವೈರಲ್ ವಿಡಿಯೋ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget