ಕರಾವಳಿಚಿಕ್ಕಮಗಳೂರು

ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ! ಸ್ಥಳದಲ್ಲೇ ಮೃತಪಟ್ಟ ತಾಯಿ-ಮಗ ..!

202

ಸರ್ಕಾರಿ ಬಸ್-ಪ್ರವಾಸಿಗರ ಕಾರಿನ ನಡುವೆ ಚಿಕ್ಕಮಗಳೂರಿನಲ್ಲಿ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಸರ್ಕಾರಿ ಬಸ್ ಮತ್ತು ಕಾರಿನ ನಡುವಿನ ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ತಾಯಿ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(12/ಆಗಸ್ಟ್) ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ಘಟನೆ ನಡೆದಿದೆ.

ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು ಮೂಲತಃ ಬೆಂಗಳೂರಿನ ಕೋಣನಕುಂಟೆಯವರು ಎಂದು ಗುರುತಿಸಲಾಗಿದ್ದು. ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು ಎನ್ನಲಾಗಿದ್ದು, ಶಿವಯಾಗಯ್ಯ ಹಿರೇಮಠ್ ಎಂಬಾತನ ಸ್ಥಿತಿ ಗಂಭೀರ,ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಪ್ರವಾಸಕ್ಕೆ ತೆರಳಿದ್ದ ಕಾರು ಮತ್ತು ಸಖಲೇಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಘಟನೆ ನಡೆದಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.

See also  ತಲವಾರು ಹಿಡಿದು ಸವಣೂರು ಕಂದಾಯ ಕಚೇರಿಗೆ ನುಗ್ಗಿದ ವ್ಯಕ್ತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget