ಕರಾವಳಿಬೆಂಗಳೂರುಸುಳ್ಯ

Gruha Jyothi Scheme:ಗೃಹಜ್ಯೋತಿ ಯೋಜನೆಯ ಫ್ರೀ ವಿದ್ಯುತ್ ನಿರೀಕ್ಷೆಯಲ್ಲಿದ್ದವರಿಗೆ ಕರೆಂಟ್ ಶಾಕ್ ..!,ಬೆಸ್ಕಾಂ ಸಿಬ್ಬಂದಿ ಕರೆಂಟ್ ಬಿಲ್ ನೀಡಿದಾಗಲೇ ಗೊತ್ತಾಯ್ತು ಅಸಲಿ ವಿಚಾರ..!

178

ನ್ಯೂಸ್ ನಾಟೌಟ್ : ರಾಜ್ಯ ಸರ್ಕಾರದ ಬಹುನಿರೀಕ್ಷಿತ ೫ ಗ್ಯಾರಂಟಿಗಳು ಇದೀಗ ನಿಧಾನಕ್ಕೆ ಅನುಷ್ಠಾನಗೊಳ್ಳುತ್ತಿದೆ ಇದರಲ್ಲಿ ಬಹುನಿರೀಕ್ಷಿತ ಗೃಹಜ್ಯೋತಿ (Gruha Jyothi Scheme) ಯೋಜನೆ ಮೊನ್ನೆಯಷ್ಟೇ ಅನುಷ್ಠಾನಗೊಂಡಿದ್ದು, ಬಹುತೇಕ ಫಲಾನುಭವಿಗಳು ಫ್ರೀ ಬಿಲ್ ನಿರೀಕ್ಷೆಯಲ್ಲಿದ್ದರು.ಆದರೆ ಬಿಲ್ ನೋಡಿ ಶಾಕ್‌ಗೊಳಗಾಗಿದ್ದಾರೆ. ಹೌದು ,ಗೃಹ ಜ್ಯೋತಿ ಯೋಜನೆಗೆ ಅಪ್ಲೈ ಮಾಡಿದಾಗಿನಿಂದ ಕೆಲವು ಫಲಾನುಭವಿಗಳು ಉಚಿತ ಕರೆಂಟ್ ಅಲ್ವ..ಹೇಗಿದ್ರೂ ಕರೆಂಟ್ ಫ್ರೀ ಅಂತ ಸ್ವಲ್ಪ ಜಾಸ್ತಿಯೇ ವಿದ್ಯುತ್ ಬಳಕೆ ಮಾಡಿದ್ದಾರೆ ಕಾಣ್ಸುತ್ತೆ . ಬೆಸ್ಕಾಂ ಸಿಬ್ಬಂದಿ ಕರೆಂಟ್ ಬಿಲ್ ಕೊಟ್ಟಾಗಲೇ ಗೊತ್ತು ಅಸಲಿ ವಿಚಾರ..!

ಜುಲೈ ತಿಂಗಳ ಬಿಲ್ ಶೂನ್ಯ ಅಂದವರಿಗೆ 200 ಯೂನಿಟ್ ಹೆಚ್ಚುವರಿ ಬಿಲ್ ಬೆಸ್ಕಾಂ ಸಿಬ್ಬಂದಿ ಕೈಗಿಟ್ಟಿದ್ದು, ಸರ್ಕಾರದ ನಿಯಮದಂತೆ 200 ಯೂನಿಟ್ ಗಿಂತ ಹೆಚ್ಚಾಗಿ ಯೂನಿಟ್ ಬಳಕೆ ಹಿನ್ನಲೆ ಬಿಲ್ ನೀಡಿದ್ದಾರೆ.ಈಗ ಫಲಾನುಭವಿಗಳು ನಾವು ಅಷ್ಟೊಂದು ವಿದ್ಯುತ್ ಬಳಸಿಯೇ ಇಲ್ಲವೆಂದು ಹೊಸ ರಾಗ ಶುರು ಹಚ್ಚಿಕೊಂಡಿದ್ದಾರೆ.

ಈ ಬಗ್ಗೆ ಆಕ್ರೋಶಗೊಂಡಿರುವ ಕೆಲ ಫಲಾನುಭವಿಗಳು ನಮ್ಮ ಮೀಟರ್ ಸರಿ ಇಲ್ಲ. ಹೀಗಾಗಿ, ನಮಗೆ 200 ಯೂನಿಟ್​ಗಿಂತ ಜಾಸ್ತಿ ಬಿಲ್ ಬಂದಿದೆ ಎಂದು ಹೇಳಿದ್ದಾರೆ.ಸರ್ಕಾರ ಗೃಹ ಜ್ಯೋತಿ ಸ್ಕೀಂನಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಸರಾಸರಿಯ ಮಾನದಂಡ ಫಿಕ್ಸ್ ಮಾಡಿದ್ದು, ಸರಾಸರಿ ಬಳಕೆಗೆ ಶೇ.10 ಪರ್ಸೆಂಟ್ ಹೆಚ್ಚುವರಿಗೆ ಜಿರೊ ಬಿಲ್ ನೀಡುತ್ತಿದೆ.

ಇನ್ನು ಯೋಜನೆಯ ನೋಂದಣಿಯನ್ನು ಜುಲೈ 1 ರಂದು ಪ್ರಾರಂಭಿಸಲಾಗಿದ್ದು, ಜುಲೈ 27 ರವರೆಗೆ ನೋಂದಾಯಿಸಿಕೊಂಡವರು ಜುಲೈ ತಿಂಗಳಲ್ಲಿ ಸರಾಸರಿ ಮಿತಿಯ ಒಳಗೆ ವಿದ್ಯುತ್ ಬಳಸಿದ್ದರೆ ಅವರಿಗೆ ‘ಶೂನ್ಯ’ ಬಿಲ್ ಬರಲಿದೆ. ಜುಲೈ 27ರ ನಂತರ ನೋಂದಾಯಿಸಿಕೊಂಡವರನ್ನು ಆಗಸ್ಟ್ ಬಿಲ್ಲಿಂಗ್​ಗೆ ಪರಿಗಣಿಸಲಾಗುತ್ತದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ಕೊಟ್ಟಿದ್ದಾರೆ.

See also  ಆ ರಾತ್ರಿ ಕಾಂತಾರದ ದೈವದ ರೀತಿ ವರ್ತಿಸಿ ಪೊಲೀಸರಿಂದ ಬಚಾವಾದೆ, ಸಿಟಿ ರವಿ ಶಾಕಿಂಗ್ ಹೇಳಿಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget