ಕರಾವಳಿಕಾಸರಗೋಡು

ಹರೀಶ್ ಪೂಂಜಾ ನೀತಿ ಸಂಹಿತೆ ಉಲ್ಲಂಘನೆ, ಎರಡು ಪ್ರತ್ಯೇಕ ದೂರು ದಾಖಲು

ನ್ಯೂಸ್ ನಾಟೌಟ್ : ಮುಂದಿನ ವಿಧಾನಸಭಾ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ‌ ಮಾ. 31ರಂದು ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಅವರು ಈ ಎರಡೂ ದೂರುಗಳನ್ನು ಶೇಖರ ಲಾಯಿಲ ಬೆಳ್ತಂಗಡಿಯವರು ಚುನಾವಣಾಧಿಕಾರಿಗಳಿಗೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ಪ್ರಕರಣ ೧: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗೆ ಹಣ ಪಾವತಿ ಮಾಡಿ ಮಾ. 30ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ ಎಂದು ಬಿಂಬಿಸಿ ಜಾಹೀರಾತು ನೀಡಿದ್ದಾರೆ. ಇದು ಮತದಾರರ ಮೇಲೆ ಪ್ರಭಾವ ಬೀರುವಂತಿದೆ ಎಂದು ಅವರು ದೂರಿದ್ದಾರೆ.

ಪ್ರಕರಣ ೨: ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾ. 30ರಂದು ಸಂಜೆ 7 ಗಂಟೆಗೆ ಬಲಿಂಜೆ ಎಂಬಲ್ಲಿ ರಾತ್ರಿ ಸುಮಾರು 12:25ರ ವರೆಗೆ ಸಭಾ ಕಾರ್ಯಕ್ರಮ ನಡೆದಿದ್ದು. ಈ ಕಾರ್ಯಕ್ರಮದಲ್ಲಿ ಊಟೋಪಾಚಾರವನ್ನು ಮತದಾರರಿಗೆ ಹಂಚಲಾಗಿದೆ. ಇದರಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದು. ಕಾರ್ಯಕ್ರಮಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಊಟೋಪಚಾರವನ್ನು ಹಂಚಲಾಗಿದೆ. ರಾತ್ರಿ 10 ಗಂಟೆಗೆ ಧ್ವನಿವರ್ಧಕ ಪರವಾನಿಗೆ ಪಡೆದು ಮಧ್ಯರಾತ್ರಿ 12:25ರ ತನಕ ಕಾನೂನು ಬಾಹಿರ ಸಭಾ ಕಾರ್ಯಕ್ರಮ ಮಾಡಲಾಗಿದೆ.

ಇದು ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟವಾಗಿ ಉಲ್ಲಂಘನೆ ಮಾಡಲಾಗಿದೆ. ಈ ಕಾರ್ಯಕ್ರಮದ ಆಯೋಜಕರು ,ಭಾಗವಹಿಸಿದ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾ. 31ರಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎರಡು ಪ್ರತ್ಯೇಕ ದೂರಿನ ಬಗ್ಗೆ ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿದ ಬಳಿಕ ಎಫ್.ಐ.ಆರ್ ದಾಖಲಿಸಿಕೊಳ್ಳುವುದಾಗಿ ದೂರುದಾರ ಶೇಖರ್ ಲಾಯಿಲ ಅವರಿಗೆ ತಿಳಿಸಿದ್ದಾರೆ.

Related posts

ಪೊಲೀಸ್ ದೌರ್ಜನ್ಯ ಪ್ರಕರಣ: ಪುತ್ತೂರು ಡಿವೈಎಸ್ಪಿ, ಸಂಪ್ಯ ಎಸ್ಐ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್, ಅರುಣ್ ಪುತ್ತಿಲ ಬರದಿರುತ್ತಿದ್ದರೆ ಹೊಡೆದು ಸಾಯಿಸ್ತಿದ್ದರು!

ಉಪ್ಪಿನಂಗಡಿ:ಸ್ಕೂಟಿ ಮತ್ತು ಕಾರ್ ನಡುವೆ ಭೀಕರ ಅಪಘಾತ,ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು,ಇಬ್ಬರು ಮಕ್ಕಳು ಗಂಭೀರ

ಸುಳ್ಯ: ಐಸ್ ಕ್ರೀಂ ಕಪ್‌ನಲ್ಲಿ ‘ಹಲ್ಲಿನ ಸೆಟ್ ಸಿಕ್ಕಿದೆ’ ಎಂದು ಗ್ರಾಹಕನಿಂದ ಗಲಾಟೆ, ಹಲ್ಲೆ..! ರೊಚ್ಚಿಗೆದ್ದ ಸ್ಥಳೀಯರಿಂದ ಹಿಗ್ಗಾಮುಗ್ಗ ಥಳಿತ..!