ಕರಾವಳಿಕಾಸರಗೋಡು

ಹರೀಶ್ ಪೂಂಜಾ ನೀತಿ ಸಂಹಿತೆ ಉಲ್ಲಂಘನೆ, ಎರಡು ಪ್ರತ್ಯೇಕ ದೂರು ದಾಖಲು

242

ನ್ಯೂಸ್ ನಾಟೌಟ್ : ಮುಂದಿನ ವಿಧಾನಸಭಾ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ‌ ಮಾ. 31ರಂದು ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಅವರು ಈ ಎರಡೂ ದೂರುಗಳನ್ನು ಶೇಖರ ಲಾಯಿಲ ಬೆಳ್ತಂಗಡಿಯವರು ಚುನಾವಣಾಧಿಕಾರಿಗಳಿಗೆ ನೀಡಿದ್ದಾರೆ ಎನ್ನುವ ಸುದ್ದಿ ಹರಿದಾಡಿದೆ.

ಪ್ರಕರಣ ೧: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗೆ ಹಣ ಪಾವತಿ ಮಾಡಿ ಮಾ. 30ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೆಸರಿನಲ್ಲಿ ಅಕ್ರಮ ಸಕ್ರಮ ಯೋಜನೆಯನ್ನು ಶಾಸಕರ ಸಾಧನೆ ಎಂದು ಬಿಂಬಿಸಿ ಜಾಹೀರಾತು ನೀಡಿದ್ದಾರೆ. ಇದು ಮತದಾರರ ಮೇಲೆ ಪ್ರಭಾವ ಬೀರುವಂತಿದೆ ಎಂದು ಅವರು ದೂರಿದ್ದಾರೆ.

ಪ್ರಕರಣ ೨: ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾ. 30ರಂದು ಸಂಜೆ 7 ಗಂಟೆಗೆ ಬಲಿಂಜೆ ಎಂಬಲ್ಲಿ ರಾತ್ರಿ ಸುಮಾರು 12:25ರ ವರೆಗೆ ಸಭಾ ಕಾರ್ಯಕ್ರಮ ನಡೆದಿದ್ದು. ಈ ಕಾರ್ಯಕ್ರಮದಲ್ಲಿ ಊಟೋಪಾಚಾರವನ್ನು ಮತದಾರರಿಗೆ ಹಂಚಲಾಗಿದೆ. ಇದರಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದು. ಕಾರ್ಯಕ್ರಮಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಊಟೋಪಚಾರವನ್ನು ಹಂಚಲಾಗಿದೆ. ರಾತ್ರಿ 10 ಗಂಟೆಗೆ ಧ್ವನಿವರ್ಧಕ ಪರವಾನಿಗೆ ಪಡೆದು ಮಧ್ಯರಾತ್ರಿ 12:25ರ ತನಕ ಕಾನೂನು ಬಾಹಿರ ಸಭಾ ಕಾರ್ಯಕ್ರಮ ಮಾಡಲಾಗಿದೆ.

ಇದು ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟವಾಗಿ ಉಲ್ಲಂಘನೆ ಮಾಡಲಾಗಿದೆ. ಈ ಕಾರ್ಯಕ್ರಮದ ಆಯೋಜಕರು ,ಭಾಗವಹಿಸಿದ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾ. 31ರಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎರಡು ಪ್ರತ್ಯೇಕ ದೂರಿನ ಬಗ್ಗೆ ಚುನಾವಣಾಧಿಕಾರಿಗಳು ಪರಿಶೀಲನೆ ಮಾಡಿದ ಬಳಿಕ ಎಫ್.ಐ.ಆರ್ ದಾಖಲಿಸಿಕೊಳ್ಳುವುದಾಗಿ ದೂರುದಾರ ಶೇಖರ್ ಲಾಯಿಲ ಅವರಿಗೆ ತಿಳಿಸಿದ್ದಾರೆ.

See also  ಕರಾವಳಿಯಲ್ಲಿ ಇಬ್ಬರನ್ನು ಬಲಿ ಪಡೆದ ಧಾರಾಕಾರ ಮಳೆ !, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಪರಿಹಾರ ವಿತರಣೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget