ಕ್ರೈಂ

ಶಿಕ್ಷಣ ವ್ಯವಸ್ಥೆಯ ಬಗ್ಗೆ ಬೇಸರ, ಸಿಎಂ ಬಂದು ಅಂತ್ಯಸಂಸ್ಕಾರ ಮಾಡಲಿ ಎಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ..!

ಹಾಸನ: ಶಿಕ್ಷಣ ವ್ಯವಸ್ಥೆಯ ವಿರುದ್ಧ ಮನನೊಂದು ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇತ್ತೀಚೆಗೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಆತ್ಮಹತ್ಯೆಗೆ ಶಿಕ್ಷಣ ಕೂಡಾ ಕಾರಣವಾಗಿದ್ದು ಆತಂಕಕಾರಿಯಾಗಿದೆ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ ಎಂದು ಸಾಯುವ ಮುನ್ನಾ ವಿಡಿಯೋ ಮಾಡಿಟ್ಟು ಹೇಮಂತ್‌ ಅನ್ನುವ ವಿದ್ಯಾರ್ಥಿ ನೇಣುಬಿಗಿದುಕೊಂಡಿದ್ದಾನೆ.

ಏನಿದು ಘಟನೆ?

ಹೇಮಂತ್ ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ, ಜಿಲ್ಲೆಯ ಅರಸೀಕೆರೆ ತಾಲೂಕಿನ ಹಿರಿಯಾಳು ನಿವಾಸಿಯಾಗಿದ್ದಾನೆ. ಆತ್ಮಹತ್ಯೆಗೆ ಮೊದಲು ಆತ 13 ನಿಮಿಷದ ವಿಡಿಯೋ ಮಾಡಿ ನೇಣಿಗೆ ಕೊರಳೊಡ್ಡಿದ್ದಾನೆ. ನನ್ನ ಸಾವಿನ ನಂತರ ಅಂಗಾಂಗ ದಾನ ಮಾಡಿ. ನನ್ನ ಅಂತ್ಯಕ್ರಿಯೆಯಲ್ಲಿ ಸಿಎಂ, ಶಿಕ್ಷಣ ಸಚಿವರು, ಆದಿ ಚುಂಚನಗಿರಿ ಶ್ರೀಗಳು ಬಾಗಿ ಆಗಬೇಕು ಅಂತ ಮನವಿ ಮಾಡಿದ್ದಾನೆ. ನನ್ನ ಸಾವು ವ್ಯರ್ಥ ಆಗಲ್ಲ. ಯಾರಾದರು ಒಬ್ಬರ ಬಲಿದಾನ ಆಗಲೇ ಬೇಕಿದೆ. ಇದರಿಂದ ನಾನು ಬದಲಾವಣೆಗೆ ಬುನಾದಿ ಹಾಕುವ ಕೆಲಸ ಮಾಡಿದ್ದೇನೆ. ಅಪ್ಪ ಅಮ್ಮ ಐ ಲವ್ ಯೂ, ನಾನು ನಿಮ್ಮನ್ನ ಮಿಸ್ ಮಾಡಿಕೊಳ್ತೀನಿ. ಈ ವಿಡಿಯೋವನ್ನು ನ್ಯೂಸ್ ಚಾನಲ್​ನಲ್ಲಿ ಪ್ರಸಾರ ಮಾಡಿ. ಎಲ್ಲರೂ ಈ ವಿಡಿಯೋವನ್ನು ನೋಡಲಿ ಅಂತ ವಿದ್ಯಾರ್ಥಿ ಹೇಮಂತ್ ಮನವಿ ಮಾಡಿದ್ದಾನೆ. ನನ್ನ ಸಾವಿನ ನಂತರ ಅಪ್ಪ ಅಮ್ಮ ಇಬ್ಬರು ಅನಾಥ ಮಕ್ಕಳನ್ನ ದತ್ತು ಪಡೆದು ಸಾಕಿ. ಆ ಇಬ್ಬರಲ್ಲಿ ನಾನು ಇರುತ್ತೇನೆ ಎಂದು ಹೇಳಿದ್ದಾನೆ.

ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸೈಬರ್ ಸೆಂಟರ್​ನಲ್ಲಿ ಕೆಲಸ ಮಾಡಬಹುದು ಅಷ್ಟೇ. ಆದರೆ ನನ್ನಪ್ಪ ಶಿಕ್ಷಕರು ಅವರ ವಿದ್ಯಾರ್ಥಿಗಳು ದೊಡ್ಡ ಸಾಧನೆ ಮಾಡಿದ್ದಾರೆ. ಹಿಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಅದು ಸಾಧ್ಯವಿತ್ತು. ಆದರೆ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಸಾದ್ಯವೇ ಇಲ್ಲ. ಸಿಎಂ, ಶಿಕ್ಷಣ ಇಲಾಖೆ, ವಿಟಿಯು ವಿಸಿ ಎಲ್ಲರೂ ಚಿಂತಿಸಿ. ಎಲ್ಲಾ ರಾಜಕೀಯ ಪಕ್ಷದ ಗಣ್ಯ ನಾಯಕರು ಶಿಕ್ಷಣ ಸುಧಾರಣೆಗೆ ಸಹಕರಿಸಿ ಅಂತ ಕೋರಿದ್ದಾನೆ.

Related posts

ಕಾರಿನಲ್ಲಿ ಸಾಕುನಾಯಿಯನ್ನು ಬಿಟ್ಟು ವಿಮಾನದಲ್ಲಿ ಹಾರಿದ ಪ್ರಯಾಣಿಕ! ಲಾಕ್ ಆದ ಕಾರಿನೊಳಗಿದ್ದ ನಾಯಿ ಬುದುಕಿದ್ದೇ ರೋಚಕ! ನಾಯಿ ಮಾಲೀಕ ಪೊಲೀಸ್ ವಶಕ್ಕೆ!

ಸುಳ್ಯ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು..! ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಳ್ಳಾರೆ: ಮಸೀದಿಯಲ್ಲಿ ಎರಡೂ ತಂಡಗಳ ನಡುವೆ ಹೊಡೆದಾಟ, ಆಸ್ಪತ್ರೆಗೆ ದಾಖಲು