ಕೆವಿಜಿ ಕ್ಯಾಂಪಸ್‌ಸುಳ್ಯ

ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆಯುರ್ವೇದ ಸಪ್ತಾಹ ಕಾರ್ಯಕ್ರಮ

142

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಇದರ ಸಹಯೋಗದೊಂದಿಗೆ ಅ.29ರಂದು ನಡೆಯಲಿರುವ 9ನೇ ವರ್ಷದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಆಯುರ್ವೇದ ಸಪ್ತಾಹ ಕಾರ್ಯಕ್ರಮ ಅ.21ರಿಂದ 29ರತನಕ ಹಮ್ಮಿಕೊಳ್ಳಲಾಗಿದೆ.

ಈ ಪ್ರಯುಕ್ತ ಸೋಮವಾರ (ಅ.21ರಂದು) ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ – “12 ರಿಂದ 21 ವಯಸ್ಸಿನ ಹದಿಹರೆಯದ ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕಾರ್ಯಾಗಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ತ್ರೀರೋಗ ಮತ್ತು ಪ್ರಸೂತಿ ತಂತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ರಶ್ಮಿ ಕೆ.ಎಸ್., ನಡೆಸಿಕೊಟ್ಟರು. ಶಾಲೆಯ 79 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಾಲಾ ಆಡಳಿತ ಮಂಡಳಿಯ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ತೇಜಸ್ವಿ ಕಡಪಲ, ಚೊಕ್ಕಾಡಿ ಇಂಗ್ಲಿಷ್ ಮೀಡಿಯಂ ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರತಿಭಾ ಎಸ್. ಆಳ್ವ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪಂಚ ಕರ್ಮ ವಿಭಾಗದ ಮುಖ್ಯಸ್ಥ ಡಾ. ಸನತ್ ಕುಮಾರ್ ಡಿ.ಜಿ., ಸ್ತ್ರೀ ರೋಗ ಮತ್ತು ಪ್ರಸೂತಿ ತಂತ್ರ ವಿಭಾಗದ ಸಹಪ್ರಾಧ್ಯಾಪಕಿ ಡಾ. ರಶ್ಮಿ ಕೆ ಎಸ್, ಚೊಕ್ಕಾಡಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಂಕೀರ್ಣ ಚೊಕ್ಕಾಡಿ ಉಪಸ್ಥಿತರಿದ್ದರು. ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿ, ಡಾ ಸನತ್ ಕುಮಾರ್ ಡಿ. ಜಿ., ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಶೋಭ ವಂದಿಸಿ ಶಿಕ್ಷಕಿ ಜಯಶ್ರೀ ಎಮ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಡಾ. ಪ್ರತಿಮಾ ಗುಪ್ತ ಡಾ. ಯು ಸಂತೋಷ್ ನಾಯಕ್, ಡಾ. ಲಕ್ಷ್ಮೀಶ ಕೆ ಎಸ್, ಡಾ. ಪಾವನ ಕೆಬಿ ಡಾ. ಸಂತೋಷ್ ನಾಯರ್, ಡಾ. ಅನಿತಾ ಎಸ್., ಸಹಕರಿಸಿದರು.

See also  ಸುಳ್ಯ ಕೆವಿಜಿ ಎನ್ ಎಂಸಿ ಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget