ಕ್ರೈಂ

ಆರೋಗ್ಯ ಇಲಾಖೆ ಅಧಿಕಾರಿ ಆತ್ಮಹತ್ಯೆಗೆ ಶರಣು,ಕಳೆದ ಮೂರು ತಿಂಗಳ ಹಿಂದೆಯಷ್ಟೇ ವರ್ಗಾವಣೆಯಾಗಿದ್ದ ವೈದ್ಯ

157

ನ್ಯೂಸ್ ನಾಟೌಟ್ : ಆರೋಗ್ಯ ಇಲಾಖೆ ಅಧಿಕಾರಿಯಾಗಿ ಮಂಡ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ನಗರದ ಮಹಾಲಕ್ಷ್ಮೀ ಲೇಔಟ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ಡಾಕ್ಟರ್ ಮೃತದೇಹ ಪತ್ತೆಯಾಗಿತ್ತು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಮೃತ ನಟರಾಜ್ ಅವರು ಕಳೆದ ಮೂರು ತಿಂಗಳ ಹಿಂದೆ ಮಂಡ್ಯ ಜಿಲ್ಲೆಗೆ ಟ್ರಾನ್ಸ್‌ಫರ್ ಆಗಿದ್ದರು ಎನ್ನಲಾಗಿದೆ.ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ನಟರಾಜ್ ರಜೆಯಲ್ಲಿದ್ದು,ರಜೆ ಮುಗಿಸಿ ಡ್ಯೂಟಿಗೆ ಹಾಜರಾಗಬೇಕಿದ್ದ ನಟರಾಜ್ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡಾಕ್ಟರ್ ನಟರಾಜ್ ಅವರು ಕುಣಿಗಲ್ ಮೂಲದವರಾಗಿದ್ದು, ಓರ್ವ ಹೆಣ್ಣು ಮಗಳು, ಪತ್ನಿ ಇದ್ದಾರೆ. ಮಾನಸಿಕವಾಗಿ ಸಾಕಷ್ಟು ನೊಂದಿದ್ದ ನಟರಾಜ್ ಅವರು 2017ರಲ್ಲಿ ಕೈ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದರು ಎನ್ನಲಾಗಿದೆ.ಮಂಡ್ಯದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ ಆಗಿರುವ ನಟರಾಜ್ ಅವರು ಮೇಲಾಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಮಹಾಲಕ್ಷ್ಮಿ ಲೇ ಔಟ್ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

See also  ಕೊಡಗು: ಹಳೆ ದ್ವೇಷ ಹಿನ್ನೆಲೆ ಕೋವಿಯಿಂದ ಗುಂಡು ಹಾರಿಸಿ ಕೊಲೆ! ನಿಗೂಢ ಸಾವಿನ ಹಿಂದಿದೆಯಾ ರಹಸ್ಯ!
  Ad Widget   Ad Widget   Ad Widget   Ad Widget   Ad Widget   Ad Widget   Ad Widget