ಬೆಂಗಳೂರು

ಮೋರಿ ನೀರಿನಲ್ಲಿ ಕೊಚ್ಚಿ ಹೋದ ಇಂಜಿನೀಯರ್ ಯುವಕ

439

ನ್ಯೂಸ್ ನಾಟೌಟ್ : ಬೆಂಗಳೂರಿನ ಕೆ.ಆರ್.ಪುರ ವಿಧಾನ ಸಭಾ ಕ್ಷೇತ್ರದ ಬಸವನಪುರ ವಾರ್ಡಿನ ಗಾಯಿತ್ರಿ ಬಡಾವಣೆಯಲ್ಲಿ ನಿನ್ನೆ ರಾತ್ರಿ 11.45 ರಲ್ಲಿ ಸುರಿದ ಬಾರಿ ಮಳೆಯಿಂದಾಗಿ ಇಂಜಿನಿಯರ್ ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಕೊಂಡು ಹೋಗಿರುವ ದುರ್ಘಟನೆ ಸಂಭವಿಸಿದೆ.

ಶಿವಮೊಗ್ಗ ಸಾಗರ ಮೂಲದ ಹುಡುಗ ಸಿವಿಎಲ್ ಇಂಜಿನಿಯರ್ ಆಗಿದ್ದರು. ಅವರು ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ಬೈಕ್ ನ್ನು ಹಿಡಿಯಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುತ್ತಾರೆ. ಸ್ಥಳದಲ್ಲಿ ಎನ್‌ಡಿಆರ್ಏಫ್ ತಂಡ ಬಿಬಿಎಂಪಿ ಸಿಬ್ಬಂದಿ ಕೊಚ್ಚಿಕೊಂಡು ಹೋಗಿರುವ ಯುವಕನ ಶೋಧ ಕಾರ್ಯಾಚರಣೆ ಮುಂದುವರಿಸಿದೆ. ಇಲ್ಲಿವರೆಗೂ ಆತನ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

See also  ಸಿಎಂ ಮುಂದೆ 6 ನಕ್ಸಲರು ಶರಣಾಗತಿ, ಸಿದ್ದರಾಮಯ್ಯ ಜೊತೆ ನಕ್ಸಲರ ಸಭೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget