Latestಮಂಗಳೂರು

ರಾಜ್ಯಾದ್ಯಂತ ಇಂದಿನಿಂದ 4 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ!!ಭಾರತೀಯ ಹವಾಮಾನ ಇಲಾಖೆ (IMD) ನೀಡಿದ ಮುನ್ಸೂಚನೆ ಏನು?

569

ನ್ಯೂಸ್‌ ನಾಟೌಟ್:  ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.ಇಂದಿನಿಂದ ಮೇ 4ರವರೆಗೆ ಭಾರೀ ಮಳೆಯಾಗಲಿದೆ ಹಾಗೂ ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ?

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಇರಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ರಾಯಚೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇರಲಿದ್ದು, ಈ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಇನ್ನು ಇಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮೇ ತಿಂಗಳಲ್ಲಿ ಉಷ್ಣ ಹವೆ ಹೆಚ್ಚಾಗಿರಲಿದ್ದು, ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕವಾಗುವ ಸಾಧ್ಯತೆಯಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣ ಹವೆ ಹೆಚ್ಚಳವಾಗಲಿದೆ. ಭಾರತದ ಹಲವು ರಾಜ್ಯಗಳಿಗೆ ಅಧಿಕ ತಾಪಮಾನದ ಬಿಸಿ ತಟ್ಟಲಿದೆ. ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ಉಷ್ಣ ಹವೆಯಿದ್ದರೂ ಕೂಡ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

See also  ಬೆಳ್ಳಂಬೆಳಿಗ್ಗೆ ಅಕ್ರಮ ಮೈಕ್ರೋ ಫೈನಾನ್ಸ್ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ..! ಮೀಟರ್ ಬಡ್ಡಿ ದಂಧೆಕೋರರ ಕಿರುಕುಳ ಆರೋಪ..!
  Ad Widget   Ad Widget   Ad Widget   Ad Widget