ಕರಾವಳಿ

ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ಜೀವ ಬೆದರಿಕೆ, ದೂರು ದಾಖಲು

365

ನ್ಯೂಸ್ ನಾಟೌಟ್ : ವಿಶ್ವ ಹಿಂದೂ ಪರಿಷತ್ ಮುಖಂಡನಿಗೆ ಮಂಗಳೂರಿನಲ್ಲಿ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿದ್ದಾರೆ ಅನ್ನುವ ಸುದ್ದಿ ಹೊರಬಿದ್ದಿದೆ.

ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506, 507ರ ಅನ್ವಯ ಎಫ್‌ಐಆರ್ ದಾಖಲಾಗಿದೆ. ತುಳು ಮಿಶ್ರಿತ ಉರ್ದು ಭಾಷೆಯಲ್ಲಿ ದುಷ್ಕರ್ಮಿಗಳು ಮಾತನಾಡಿದ್ದರು ಎಂದು ತಿಳಿದು ಬಂದಿದೆ. ಸದ್ಯ ಕಂಕನಾಡಿ ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಳಂಜದಲ್ಲಿ ಮಸೂದ್ , ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಅನ್ನುವ ವ್ಯಕ್ತಿಯ ಹತ್ಯೆ ನಡೆದಿತ್ತು. ಕರಾವಳಿಯಲ್ಲಿ ಹತ್ತು ದಿನಗಳಲ್ಲಿ ಮೂರು ಹೆಣ ಬಿದ್ದಿತ್ತು. ಸದ್ಯ ದಕ್ಷಿಣ ಕನ್ನಡ ಸಹಜ ಸ್ಥಿತಿಗೆ ಬಂದಿದೆಯಾದರೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ನಡುವೆ ಕೆಲವು ಹಿಂದೂ ನಾಯಕರಿಗೆ ಕೊಲೆ ಬೆದರಿಕೆ ಬರುತ್ತಿದ್ದು ಅವರೆಲ್ಲರೂ ಕೂಡ ಪೊಲೀಸ್ ದೂರು ನೀಡಿದ್ದಾರೆ.

See also  ಪೊಲೀಸ್ ದೌರ್ಜನ್ಯ ಪ್ರಕರಣ: ಪುತ್ತೂರು ಡಿವೈಎಸ್ಪಿ, ಸಂಪ್ಯ ಎಸ್ಐ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್, ಅರುಣ್ ಪುತ್ತಿಲ ಬರದಿರುತ್ತಿದ್ದರೆ ಹೊಡೆದು ಸಾಯಿಸ್ತಿದ್ದರು!
  Ad Widget   Ad Widget   Ad Widget   Ad Widget   Ad Widget   Ad Widget   Ad Widget